Home / ಲೇಖನ / ವಿಜ್ಞಾನ / ಎಲ್ಲಕ್ಕೂ ತಂದೆಯೇ ಕಾರಣ

ಎಲ್ಲಕ್ಕೂ ತಂದೆಯೇ ಕಾರಣ

ಗಂಡು ಮಕ್ಕಳ ವ್ಯಾಮೋಹ ಅತೀತವಾಗುತ್ತಿದೆ. ಗಂಡೆಂದರೆ ವಂಶವನ್ನು ಬೆಳೆಸುತ್ತಾನೆ. ಸಂಸಾರವನ್ನು ಸಾಕಿ ಸಲಹುತ್ತಾನೆ ಎಂಬಿತ್ಯಾದಿ ಕಾರಣಗಳನ್ನಿಡಲಾಗುತ್ತದೆ. ಹೆಣ್ಣಾದರೆ ಮದುವೆ, ಮುಂಜಿ, ವಡವೆ ವಸ್ತ್ರ, ವರದಕ್ಷಿಣೆ, ಕೊಡಬೇಕಾಗುತ್ತದೆ. ಅದಕ್ಕಾಗಿ ಹೆಣ್ಣು ಸಂತಾನವು ಒಂದೇ ಇರಲೆಂಬ ಹಂಬಲ ನಮ್ಮ ಮೂರ್ಖ ಜನಕ್ಕಿದೆ. ಹೆಣ್ಣು ಹೆಚ್ಚಾದರೆ ಒಂದು ಗಂಡು ಮಗುವನ್ನು ಹೆತ್ತುಕೋಡದ ಗಯ್ಯಾಳಿ, ಎಂದು ಹೆಣ್ಣಿಗೆ ಶಪಿಸಲಾಗುತ್ತದೆ. ನಿಜವಾಗಿ ನೋಡಿದರೆ ಇಂದು ಗೌರವ ಪ್ರತಿಷ್ಟೇ ವಂಶದ ವಾಹಿನಿಗೆ ಹೆಣ್ಣೇ ಬಹುತೇಕ ಕಡೆ ಸಾಬೀತಾಗುತ್ತಿದ್ದಾಳೆ ಮತ್ತು ತಂದೆ ತಾಯಿಯರನ್ನು ಸಲಹುತ್ತಾಳೆ, ಸಂತೈಸುತ್ತಾಳೆ. ಗಂಡುಮಕ್ಕಳಲ್ಲಿ ಬಹುತೇಕ ಜನ ಪೋಲಿ ಪುಂಡರಾಗಿ ಹಿಂಸೆಯಲ್ಲಿ ತೊಡಗಿ ಮರ್ಯಾದೆಯನ್ನು ಹರಾಜು ಹಾಕುವುದು ನಮ್ಮ ಜನಕ್ಕೆ ಕಾಣುವುದೇ ಇಲ್ಲ. ಇದೇನೇ ಇರಲಿ, ಇಲ್ಲಿ ಇದು ಮುಖ್ಯ ಪ್ರಶ್ನೆ ಅಲ್ಲವೇ ಅಲ್ಲ. ಈಗ ವೈಜ್ಞಾನಿಕವಾಗಿ ಚಿಂತಿಸೋಣ. ಯಾವುದೇ ಮಗುವಿನಲಿಂಗ ನಿರ್ಧಾರವಾಗುವುದು ತಂದೆಯಿಂದ ಮಾತ್ರವೆಂದು ವಿಜ್ಞಾನಿಗಳು ಹೇಳುತ್ತಾರೆ. ತಂದೆಯಾದವನು X ಕ್ರೋಮೊಜೋಮ್, ನೀಡಿದರೆ ತಾಯಿಯ x ಜತೆಗೂಡಿ XX ಆಗಿ ಹೆಣ್ಣಾಗುತ್ತದೆ. y ಕ್ರೋಮೋಜೋಮ್ ನೀಡಿದರೆ ತಾಯಿಯ x ಕ್ರೋಮೋಜೋಮ್ ಜೊತೆ ಸೇರಿ xy ಗಂಡಾಗುತ್ತದೆ. ಆದ್ದರಿಂದ ಗಂಡಿಗೆ ತಂದೆ ನೀಡುವ ಕ್ರೋಮೋಜೋಮ್ ಹೆಣ್ಣು ಅಥವಾ ಗಂಡನ್ನು ರೂಪಿಸುತ್ತದೆ. ವಾಸ್ತವ ಸ್ಥಿತಿ ಹೀಗಿರುವಾಗ ಹೆಂಡತಿಯಾದವಳು ಹೆಣ್ಣು ಹೆತ್ತರೆ ಗಂಡುಮಗುವಿಗಾಗಿ ಹಂಬಲಿಸಿ ಮತ್ತೆ ಮತ್ತೇ ಗರ್ಭಿಣಿಯಾಗುತ್ತಾಳೆ. ಇದೇ ರೀತಿ ಒಂದು ಮಗುವಿನಿಂದ ಮತ್ತೊಂದು ಮಗುವಿಗೆ ಅಂತರವಿಲ್ಲದೇ ಗರ್ಭೀಣಿಯಾದವಳು ದೈಹಿಕವಾಗಿ ಶಕ್ತಿಯನ್ನು ಕುಂದಿಸಿಕೊಳ್ಳುತ್ತಾಳೆ.

ತಿನ್ನುವ ಆಹಾರದಲ್ಲಿ ಹೆಚ್ಚಿನ ಪೌಷ್ಟಿಕ ಆಹಾರವನ್ನು ಮನೆಯ ಯಜಮಾನನಿಗೆ ಅಂದರೆ ಗಂಡನಿಗೆ ಸಲ್ಲುವುದರಿಂದ ತಾಯಿ ತಿನ್ನುವ ಆಹಾರ ಪೌಷ್ಟಿಕವಾಗಿರುವುದಿಲ್ಲ. ಹೀಗೆ ದಿನಗಳೆದಂತೆ ಕೆಲವೊಮ್ಮೆ ಹೆರುವ ಮಗು ಅಪೌಷ್ಠಿಕತೆಯಿಂದ ಇದು ಸರಿಯಾದ ರೀತಿಯಲಿ ಬೆಳವಣಿಗೆಯಾಗದೇ ಹುಟ್ಟುತ್ತದೆ ಎಂದು ವಿಜ್ಞಾನಿಗಳು ಹೇಳುತ್ತಾರೆ.

ಯಾವುದೇ ಹೆಣ್ಣು ಅಥವಾ ಗಂಡು ಮಗುವಾಗಬೇಕಾದರೆ ಗಂಡಿನ x-ಅಥವಾ y ಕ್ರೋಮೊಜೋಮ್‌ಗಳೇ ಕಾರಣವಾಗಿರುತ್ತವೆ ಎಂಬ ಸತ್ಯವನ್ನು ಹೆಣ್ಣಿಗೆ ತೆಗಳುವವರು ಅರಿತುಕೊಳ್ಳಬೇಕಿದೆ.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...