Home / ಲೇಖನ / ವಿಜ್ಞಾನ / ಎಲ್ಲಕ್ಕೂ ತಂದೆಯೇ ಕಾರಣ

ಎಲ್ಲಕ್ಕೂ ತಂದೆಯೇ ಕಾರಣ

ಗಂಡು ಮಕ್ಕಳ ವ್ಯಾಮೋಹ ಅತೀತವಾಗುತ್ತಿದೆ. ಗಂಡೆಂದರೆ ವಂಶವನ್ನು ಬೆಳೆಸುತ್ತಾನೆ. ಸಂಸಾರವನ್ನು ಸಾಕಿ ಸಲಹುತ್ತಾನೆ ಎಂಬಿತ್ಯಾದಿ ಕಾರಣಗಳನ್ನಿಡಲಾಗುತ್ತದೆ. ಹೆಣ್ಣಾದರೆ ಮದುವೆ, ಮುಂಜಿ, ವಡವೆ ವಸ್ತ್ರ, ವರದಕ್ಷಿಣೆ, ಕೊಡಬೇಕಾಗುತ್ತದೆ. ಅದಕ್ಕಾಗಿ ಹೆಣ್ಣು ಸಂತಾನವು ಒಂದೇ ಇರಲೆಂಬ ಹಂಬಲ ನಮ್ಮ ಮೂರ್ಖ ಜನಕ್ಕಿದೆ. ಹೆಣ್ಣು ಹೆಚ್ಚಾದರೆ ಒಂದು ಗಂಡು ಮಗುವನ್ನು ಹೆತ್ತುಕೋಡದ ಗಯ್ಯಾಳಿ, ಎಂದು ಹೆಣ್ಣಿಗೆ ಶಪಿಸಲಾಗುತ್ತದೆ. ನಿಜವಾಗಿ ನೋಡಿದರೆ ಇಂದು ಗೌರವ ಪ್ರತಿಷ್ಟೇ ವಂಶದ ವಾಹಿನಿಗೆ ಹೆಣ್ಣೇ ಬಹುತೇಕ ಕಡೆ ಸಾಬೀತಾಗುತ್ತಿದ್ದಾಳೆ ಮತ್ತು ತಂದೆ ತಾಯಿಯರನ್ನು ಸಲಹುತ್ತಾಳೆ, ಸಂತೈಸುತ್ತಾಳೆ. ಗಂಡುಮಕ್ಕಳಲ್ಲಿ ಬಹುತೇಕ ಜನ ಪೋಲಿ ಪುಂಡರಾಗಿ ಹಿಂಸೆಯಲ್ಲಿ ತೊಡಗಿ ಮರ್ಯಾದೆಯನ್ನು ಹರಾಜು ಹಾಕುವುದು ನಮ್ಮ ಜನಕ್ಕೆ ಕಾಣುವುದೇ ಇಲ್ಲ. ಇದೇನೇ ಇರಲಿ, ಇಲ್ಲಿ ಇದು ಮುಖ್ಯ ಪ್ರಶ್ನೆ ಅಲ್ಲವೇ ಅಲ್ಲ. ಈಗ ವೈಜ್ಞಾನಿಕವಾಗಿ ಚಿಂತಿಸೋಣ. ಯಾವುದೇ ಮಗುವಿನಲಿಂಗ ನಿರ್ಧಾರವಾಗುವುದು ತಂದೆಯಿಂದ ಮಾತ್ರವೆಂದು ವಿಜ್ಞಾನಿಗಳು ಹೇಳುತ್ತಾರೆ. ತಂದೆಯಾದವನು X ಕ್ರೋಮೊಜೋಮ್, ನೀಡಿದರೆ ತಾಯಿಯ x ಜತೆಗೂಡಿ XX ಆಗಿ ಹೆಣ್ಣಾಗುತ್ತದೆ. y ಕ್ರೋಮೋಜೋಮ್ ನೀಡಿದರೆ ತಾಯಿಯ x ಕ್ರೋಮೋಜೋಮ್ ಜೊತೆ ಸೇರಿ xy ಗಂಡಾಗುತ್ತದೆ. ಆದ್ದರಿಂದ ಗಂಡಿಗೆ ತಂದೆ ನೀಡುವ ಕ್ರೋಮೋಜೋಮ್ ಹೆಣ್ಣು ಅಥವಾ ಗಂಡನ್ನು ರೂಪಿಸುತ್ತದೆ. ವಾಸ್ತವ ಸ್ಥಿತಿ ಹೀಗಿರುವಾಗ ಹೆಂಡತಿಯಾದವಳು ಹೆಣ್ಣು ಹೆತ್ತರೆ ಗಂಡುಮಗುವಿಗಾಗಿ ಹಂಬಲಿಸಿ ಮತ್ತೆ ಮತ್ತೇ ಗರ್ಭಿಣಿಯಾಗುತ್ತಾಳೆ. ಇದೇ ರೀತಿ ಒಂದು ಮಗುವಿನಿಂದ ಮತ್ತೊಂದು ಮಗುವಿಗೆ ಅಂತರವಿಲ್ಲದೇ ಗರ್ಭೀಣಿಯಾದವಳು ದೈಹಿಕವಾಗಿ ಶಕ್ತಿಯನ್ನು ಕುಂದಿಸಿಕೊಳ್ಳುತ್ತಾಳೆ.

ತಿನ್ನುವ ಆಹಾರದಲ್ಲಿ ಹೆಚ್ಚಿನ ಪೌಷ್ಟಿಕ ಆಹಾರವನ್ನು ಮನೆಯ ಯಜಮಾನನಿಗೆ ಅಂದರೆ ಗಂಡನಿಗೆ ಸಲ್ಲುವುದರಿಂದ ತಾಯಿ ತಿನ್ನುವ ಆಹಾರ ಪೌಷ್ಟಿಕವಾಗಿರುವುದಿಲ್ಲ. ಹೀಗೆ ದಿನಗಳೆದಂತೆ ಕೆಲವೊಮ್ಮೆ ಹೆರುವ ಮಗು ಅಪೌಷ್ಠಿಕತೆಯಿಂದ ಇದು ಸರಿಯಾದ ರೀತಿಯಲಿ ಬೆಳವಣಿಗೆಯಾಗದೇ ಹುಟ್ಟುತ್ತದೆ ಎಂದು ವಿಜ್ಞಾನಿಗಳು ಹೇಳುತ್ತಾರೆ.

ಯಾವುದೇ ಹೆಣ್ಣು ಅಥವಾ ಗಂಡು ಮಗುವಾಗಬೇಕಾದರೆ ಗಂಡಿನ x-ಅಥವಾ y ಕ್ರೋಮೊಜೋಮ್‌ಗಳೇ ಕಾರಣವಾಗಿರುತ್ತವೆ ಎಂಬ ಸತ್ಯವನ್ನು ಹೆಣ್ಣಿಗೆ ತೆಗಳುವವರು ಅರಿತುಕೊಳ್ಳಬೇಕಿದೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...