ಹುಬ್ಬಳ್ಳಿಯ ಶಿವಾನಂದ ಮೂರ್ತಿ ಅವರಿಂದ ಹೊಸ ಮಾದರಿಯ ಸ್ಪ್ರೇಯರ್

ಹುಬ್ಬಳ್ಳಿಯ ಶಿವಾನಂದ ಮೂರ್ತಿ ಅವರಿಂದ ಹೊಸ ಮಾದರಿಯ ಸ್ಪ್ರೇಯರ್

ದಿನನಿತ್ಯ ವೈಜ್ಞಾನಿಕವಾಗಿ ಏನಾದರೊಂದು ಆವಿಷ್ಕಾರಗಳಾಗುತ್ತಲೇ ಇರುತ್ತವೆ. ಜೈವಿಕವಾಗಿ ಆರೋಗ್ಯದಲ್ಲಿ ಕೃಷಿರಂಗದಲ್ಲಿ ಹೀಗೆ ಹೊಸ ಹೊಸ ತಂತ್ರಜ್ಞಾನಗಳನ್ನು ಕಂಡು ಹಿಡಿಯಲಾಗುತ್ತದೆ. ಈ ಬಾರಿ ಹುಬ್ಬಳ್ಳಿಯ ಯುವ ಉತ್ಸಾಹಿ ಶಿವಾನಂದ ಮೂರ್ತಿ ಅವರು ಕೃಷಿ ಕ್ಷೇತ್ರಕ್ಕಾಗಿ ಹೊಸ ಮಾದರಿಯ ಸ್ಪ್ರೇಯರೊಂದನ್ನು ಸ್ವತಃ ತಯಾರಿಸಿದ್ದಾರೆ. ಈಗಿರುವ ಸ್ಪ್ರೇಯರ್‍ಗಳು ವಿಭಿನ್ನವಾಗಿ, ವೈಶಿಷ್ಟ್ಯವಾಗಿ ಮಾರುಕಟ್ಟೆಗೆ ಬಂದಿವೆ. ಈ ಸ್ಪ್ರೇಯರ್‌ನಿಂದ ಕಾರನ್ನು ಕಡಿಮೆ ನೀರಿನಿಂದ ತೊಳೆಯಲುಬಹುದು ಔಷಧಿಗಳನ್ನು ಸಿಂಪಡಿಸಬಹುದು. ನೆಲವನ್ನು ಸ್ವಚ್ಚಗೊಳಿಸಬಹುದು. ಹೀಗೆ ಬಹು ಉಪಯೋಗಿ ಯಂತ್ರ ಇದು. ಈ ಸ್ಪ್ರೇಯರ್‌ಗೆ ಒಮ್ಮೆಗಾಳಿ ತುಂಬಿಸಿ ಹೆಗಲಿಗೇರಿಸಿ ಸಿಂಪಡಿಸ ಹೊರಟರೆ ತುಂಬಿಸಿದ ದ್ರಾವಣ ಮುಗಿಯುವ ತನಕ ಗಾಳಿ ಹಾಕಬೇಕಿಲ್ಲ ಸ್ಪ್ರೇಯರ್ ಟ್ಯಾಂಕಿನಲ್ಲಿ ಗಾಳಿ ಒಳಹೋಗುವ ವಾಲ್ವ್ (ವಾಹನಗಳ ಟ್ಟೂಬ್ ವಾಲ್ವ ತರಹದ್ದು ಇದೆ. ಇದಕ್ಕೆ ಪೆಡಲ್‌ ಪಂಪ್‌ನಿಂದ ಗಾಳಿತುಂಬಿಬಿಡುವುದು ಗಾಳಿಯನ್ನು ೬೫.೭೦ ಗೇಜ್‌ನಷ್ಟು ತುಂಬಿದರೆ ಸಾಕು. ತುಂಬಿಸುವಾಗ ಹೆಚ್ಚಾದರೆ ಅದು ತನ್ನಿಂದ ತಾನೆ ಹೊರಹೋಗಲು ಆಟೋಮೆಟಿಕ್ ಸೆಫ್ಟಿ ವಾಲ್ವ ಇದೆ. ಇವೆರಡೂ ವ್ಯವಸ್ಥೆಗಳೂ ತೀರ ಸರಳವಾದವುಗಳು. ಮಾಮೂಲಿ ಟ್ರಾಕ್ಟರ್ ಟ್ಯೂಬ್‌ಗೆ ಏರ್‌ಇನ್ ಟೇಕ್‌ವಾಲ್ವನ್ನೆ ಬಳಸಲಾಗಿದೆ. ಎಲ್ಲ ಸುಲಭ ಸರಳ ವ್ಯವಸ್ಥೆಯಿಂದ ಕೂಡಿದ ಇದಕ್ಕೆ ಸ್ಪ್ರೇಮಾಡುವ ವಾಲ್ವ್‌ ಕೂಡಾ ಇದೇ ರೀತಿ ಇದೆ. ಸ್ಪ್ರೇಯಲ್ಲಿ ೩ ವಿಧದಲ್ಲಿ ಸಿಂಪರಣೆ ಮಾಡಲು ಅವಕಾಶವಿದೆ. ಮಿಸ್ಟ್ ಸ್ಪ್ರೇ ಸೇರಿದಂತೆ ಬೇರೆ ಬೇರೆ ಸಿಂಪರಣೆ ಸಾಧ್ಯವಿದೆ. ಸಣ್ಣಗಿಡಕ್ಕೆ ಸಣ್ಣ ತರದಲ್ಲೂ ದೊಡ್ಡ ಗಿಡಗಳಿಗೆ ದೊಡ್ಡದಾಗಿಯೂ ಬೇಕಾದಂತೆ ಸ್ಪ್ರೇ ಮಾಡುವ ವ್ಯವಸ್ಥೆಗಳಿದ್ದು ದ್ರಾವಣ ಅನವಶ್ಯಕವಾಗಿ ವ್ಯಯವಾಗುವುದಿಲ್ಲ. ಇದಕ್ಕಾಗಿ ಸ್ಪ್ರೇಯರ್ ಟ್ಯಾಂಕಿಯಲ್ಲಿ ಕಂಟ್ರೋಲ್ ವಾಲ್ವ್‌ ಇದೆ. ಸ್ಯಾಪ್‌ಸ್ಯಾಕ್ ಸ್ಪ್ರೇಯರ್ ಆಗಿಯೂ, ಗಟೋರ್ ಸ್ಪ್ರೇಯ‌ರಾಗಿಯೂ ಪವರ್ ಸ್ಪ್ರೇಯರ್ ಆಗಿಯೂ ಬ್ಯಾಟರಿ ಸ್ಪ್ರೇಯರ್ ಆಗಿಯೂ ಇದು ರೈತರಿಗೆ ಇದು ಅತ್ಯಂತ ಅನುಕೂಲಕರವಾಗಿದೆ.

ಸ್ಪ್ರೇಯರ್ ಟ್ಯಾಂಕಿಯನ್ನು ಅನುಕೂಲಕ್ಕಾಗಿ ಎರಡು ಬಗೆಯಲ್ಲಿ ತಯಾರಿಸಲಾಗಿದೆ. ೧೬ ಗೇಜಿದ ಗ್ಯಾಲ್ವ್‌ನೈಸ್ಡ್ ಕಬ್ಬಿಣದಲ್ಲಿ ಮಾಡಿದ ಟ್ಯಾಂಕಿ ಒಂದಾದರೆ ಇನ್ನೊಂದು ಸ್ಟೀಲಿನದು. ದ್ರಾವಣ ಯಾವುದೇ ರೀತಿಯ ರಾಸಾಯನಿಕ ಕ್ರಿಯೆಗೆ ಹಾಳಾಗದಿರುವಂತೆ ರಬ್ಬರ್‌ಕೋಟ್ ಗಾಲ್ವಾ ಮತ್ತು ಪ್ಲಾಸ್ಟಿಕ್‌ಗಳಿಂದ ಕೋಟ್ ಮಾಡಲಾಗಿದ್ದು ಯಾವುದೇ ರಾಸಾಯನಿಕ ಪರಿಣಾಮಕ್ಕೆ ಒಳಪಡಲಾರದು. ಶಿವಾ ಆಗ್ರಿ ಸ್ಪ್ರೇಯರ್ ಎಂಬ ಬ್ರ್ಯಾಂಡಿನಲ್ಲಿ ಇದನ್ನು ತಯಾರಿಸಿ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದಂಡ ಬಂತವ್ವಾ ದಂಡ
Next post ಯಾವ ಕ್ಷಣದಲಿ ಯಾರೋ

ಸಣ್ಣ ಕತೆ

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

cheap jordans|wholesale air max|wholesale jordans|wholesale jewelry|wholesale jerseys