Home / ಲೇಖನ / ಕೃಷಿ / ಹುಬ್ಬಳ್ಳಿಯ ಶಿವಾನಂದ ಮೂರ್ತಿ ಅವರಿಂದ ಹೊಸ ಮಾದರಿಯ ಸ್ಪ್ರೇಯರ್

ಹುಬ್ಬಳ್ಳಿಯ ಶಿವಾನಂದ ಮೂರ್ತಿ ಅವರಿಂದ ಹೊಸ ಮಾದರಿಯ ಸ್ಪ್ರೇಯರ್

ದಿನನಿತ್ಯ ವೈಜ್ಞಾನಿಕವಾಗಿ ಏನಾದರೊಂದು ಆವಿಷ್ಕಾರಗಳಾಗುತ್ತಲೇ ಇರುತ್ತವೆ. ಜೈವಿಕವಾಗಿ ಆರೋಗ್ಯದಲ್ಲಿ ಕೃಷಿರಂಗದಲ್ಲಿ ಹೀಗೆ ಹೊಸ ಹೊಸ ತಂತ್ರಜ್ಞಾನಗಳನ್ನು ಕಂಡು ಹಿಡಿಯಲಾಗುತ್ತದೆ. ಈ ಬಾರಿ ಹುಬ್ಬಳ್ಳಿಯ ಯುವ ಉತ್ಸಾಹಿ ಶಿವಾನಂದ ಮೂರ್ತಿ ಅವರು ಕೃಷಿ ಕ್ಷೇತ್ರಕ್ಕಾಗಿ ಹೊಸ ಮಾದರಿಯ ಸ್ಪ್ರೇಯರೊಂದನ್ನು ಸ್ವತಃ ತಯಾರಿಸಿದ್ದಾರೆ. ಈಗಿರುವ ಸ್ಪ್ರೇಯರ್‍ಗಳು ವಿಭಿನ್ನವಾಗಿ, ವೈಶಿಷ್ಟ್ಯವಾಗಿ ಮಾರುಕಟ್ಟೆಗೆ ಬಂದಿವೆ. ಈ ಸ್ಪ್ರೇಯರ್‌ನಿಂದ ಕಾರನ್ನು ಕಡಿಮೆ ನೀರಿನಿಂದ ತೊಳೆಯಲುಬಹುದು ಔಷಧಿಗಳನ್ನು ಸಿಂಪಡಿಸಬಹುದು. ನೆಲವನ್ನು ಸ್ವಚ್ಚಗೊಳಿಸಬಹುದು. ಹೀಗೆ ಬಹು ಉಪಯೋಗಿ ಯಂತ್ರ ಇದು. ಈ ಸ್ಪ್ರೇಯರ್‌ಗೆ ಒಮ್ಮೆಗಾಳಿ ತುಂಬಿಸಿ ಹೆಗಲಿಗೇರಿಸಿ ಸಿಂಪಡಿಸ ಹೊರಟರೆ ತುಂಬಿಸಿದ ದ್ರಾವಣ ಮುಗಿಯುವ ತನಕ ಗಾಳಿ ಹಾಕಬೇಕಿಲ್ಲ ಸ್ಪ್ರೇಯರ್ ಟ್ಯಾಂಕಿನಲ್ಲಿ ಗಾಳಿ ಒಳಹೋಗುವ ವಾಲ್ವ್ (ವಾಹನಗಳ ಟ್ಟೂಬ್ ವಾಲ್ವ ತರಹದ್ದು ಇದೆ. ಇದಕ್ಕೆ ಪೆಡಲ್‌ ಪಂಪ್‌ನಿಂದ ಗಾಳಿತುಂಬಿಬಿಡುವುದು ಗಾಳಿಯನ್ನು ೬೫.೭೦ ಗೇಜ್‌ನಷ್ಟು ತುಂಬಿದರೆ ಸಾಕು. ತುಂಬಿಸುವಾಗ ಹೆಚ್ಚಾದರೆ ಅದು ತನ್ನಿಂದ ತಾನೆ ಹೊರಹೋಗಲು ಆಟೋಮೆಟಿಕ್ ಸೆಫ್ಟಿ ವಾಲ್ವ ಇದೆ. ಇವೆರಡೂ ವ್ಯವಸ್ಥೆಗಳೂ ತೀರ ಸರಳವಾದವುಗಳು. ಮಾಮೂಲಿ ಟ್ರಾಕ್ಟರ್ ಟ್ಯೂಬ್‌ಗೆ ಏರ್‌ಇನ್ ಟೇಕ್‌ವಾಲ್ವನ್ನೆ ಬಳಸಲಾಗಿದೆ. ಎಲ್ಲ ಸುಲಭ ಸರಳ ವ್ಯವಸ್ಥೆಯಿಂದ ಕೂಡಿದ ಇದಕ್ಕೆ ಸ್ಪ್ರೇಮಾಡುವ ವಾಲ್ವ್‌ ಕೂಡಾ ಇದೇ ರೀತಿ ಇದೆ. ಸ್ಪ್ರೇಯಲ್ಲಿ ೩ ವಿಧದಲ್ಲಿ ಸಿಂಪರಣೆ ಮಾಡಲು ಅವಕಾಶವಿದೆ. ಮಿಸ್ಟ್ ಸ್ಪ್ರೇ ಸೇರಿದಂತೆ ಬೇರೆ ಬೇರೆ ಸಿಂಪರಣೆ ಸಾಧ್ಯವಿದೆ. ಸಣ್ಣಗಿಡಕ್ಕೆ ಸಣ್ಣ ತರದಲ್ಲೂ ದೊಡ್ಡ ಗಿಡಗಳಿಗೆ ದೊಡ್ಡದಾಗಿಯೂ ಬೇಕಾದಂತೆ ಸ್ಪ್ರೇ ಮಾಡುವ ವ್ಯವಸ್ಥೆಗಳಿದ್ದು ದ್ರಾವಣ ಅನವಶ್ಯಕವಾಗಿ ವ್ಯಯವಾಗುವುದಿಲ್ಲ. ಇದಕ್ಕಾಗಿ ಸ್ಪ್ರೇಯರ್ ಟ್ಯಾಂಕಿಯಲ್ಲಿ ಕಂಟ್ರೋಲ್ ವಾಲ್ವ್‌ ಇದೆ. ಸ್ಯಾಪ್‌ಸ್ಯಾಕ್ ಸ್ಪ್ರೇಯರ್ ಆಗಿಯೂ, ಗಟೋರ್ ಸ್ಪ್ರೇಯ‌ರಾಗಿಯೂ ಪವರ್ ಸ್ಪ್ರೇಯರ್ ಆಗಿಯೂ ಬ್ಯಾಟರಿ ಸ್ಪ್ರೇಯರ್ ಆಗಿಯೂ ಇದು ರೈತರಿಗೆ ಇದು ಅತ್ಯಂತ ಅನುಕೂಲಕರವಾಗಿದೆ.

ಸ್ಪ್ರೇಯರ್ ಟ್ಯಾಂಕಿಯನ್ನು ಅನುಕೂಲಕ್ಕಾಗಿ ಎರಡು ಬಗೆಯಲ್ಲಿ ತಯಾರಿಸಲಾಗಿದೆ. ೧೬ ಗೇಜಿದ ಗ್ಯಾಲ್ವ್‌ನೈಸ್ಡ್ ಕಬ್ಬಿಣದಲ್ಲಿ ಮಾಡಿದ ಟ್ಯಾಂಕಿ ಒಂದಾದರೆ ಇನ್ನೊಂದು ಸ್ಟೀಲಿನದು. ದ್ರಾವಣ ಯಾವುದೇ ರೀತಿಯ ರಾಸಾಯನಿಕ ಕ್ರಿಯೆಗೆ ಹಾಳಾಗದಿರುವಂತೆ ರಬ್ಬರ್‌ಕೋಟ್ ಗಾಲ್ವಾ ಮತ್ತು ಪ್ಲಾಸ್ಟಿಕ್‌ಗಳಿಂದ ಕೋಟ್ ಮಾಡಲಾಗಿದ್ದು ಯಾವುದೇ ರಾಸಾಯನಿಕ ಪರಿಣಾಮಕ್ಕೆ ಒಳಪಡಲಾರದು. ಶಿವಾ ಆಗ್ರಿ ಸ್ಪ್ರೇಯರ್ ಎಂಬ ಬ್ರ್ಯಾಂಡಿನಲ್ಲಿ ಇದನ್ನು ತಯಾರಿಸಿ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...