ಹುಬ್ಬಳ್ಳಿಯ ಶಿವಾನಂದ ಮೂರ್ತಿ ಅವರಿಂದ ಹೊಸ ಮಾದರಿಯ ಸ್ಪ್ರೇಯರ್

ಹುಬ್ಬಳ್ಳಿಯ ಶಿವಾನಂದ ಮೂರ್ತಿ ಅವರಿಂದ ಹೊಸ ಮಾದರಿಯ ಸ್ಪ್ರೇಯರ್

ದಿನನಿತ್ಯ ವೈಜ್ಞಾನಿಕವಾಗಿ ಏನಾದರೊಂದು ಆವಿಷ್ಕಾರಗಳಾಗುತ್ತಲೇ ಇರುತ್ತವೆ. ಜೈವಿಕವಾಗಿ ಆರೋಗ್ಯದಲ್ಲಿ ಕೃಷಿರಂಗದಲ್ಲಿ ಹೀಗೆ ಹೊಸ ಹೊಸ ತಂತ್ರಜ್ಞಾನಗಳನ್ನು ಕಂಡು ಹಿಡಿಯಲಾಗುತ್ತದೆ. ಈ ಬಾರಿ ಹುಬ್ಬಳ್ಳಿಯ ಯುವ ಉತ್ಸಾಹಿ ಶಿವಾನಂದ ಮೂರ್ತಿ ಅವರು ಕೃಷಿ ಕ್ಷೇತ್ರಕ್ಕಾಗಿ ಹೊಸ ಮಾದರಿಯ ಸ್ಪ್ರೇಯರೊಂದನ್ನು ಸ್ವತಃ ತಯಾರಿಸಿದ್ದಾರೆ. ಈಗಿರುವ ಸ್ಪ್ರೇಯರ್‍ಗಳು ವಿಭಿನ್ನವಾಗಿ, ವೈಶಿಷ್ಟ್ಯವಾಗಿ ಮಾರುಕಟ್ಟೆಗೆ ಬಂದಿವೆ. ಈ ಸ್ಪ್ರೇಯರ್‌ನಿಂದ ಕಾರನ್ನು ಕಡಿಮೆ ನೀರಿನಿಂದ ತೊಳೆಯಲುಬಹುದು ಔಷಧಿಗಳನ್ನು ಸಿಂಪಡಿಸಬಹುದು. ನೆಲವನ್ನು ಸ್ವಚ್ಚಗೊಳಿಸಬಹುದು. ಹೀಗೆ ಬಹು ಉಪಯೋಗಿ ಯಂತ್ರ ಇದು. ಈ ಸ್ಪ್ರೇಯರ್‌ಗೆ ಒಮ್ಮೆಗಾಳಿ ತುಂಬಿಸಿ ಹೆಗಲಿಗೇರಿಸಿ ಸಿಂಪಡಿಸ ಹೊರಟರೆ ತುಂಬಿಸಿದ ದ್ರಾವಣ ಮುಗಿಯುವ ತನಕ ಗಾಳಿ ಹಾಕಬೇಕಿಲ್ಲ ಸ್ಪ್ರೇಯರ್ ಟ್ಯಾಂಕಿನಲ್ಲಿ ಗಾಳಿ ಒಳಹೋಗುವ ವಾಲ್ವ್ (ವಾಹನಗಳ ಟ್ಟೂಬ್ ವಾಲ್ವ ತರಹದ್ದು ಇದೆ. ಇದಕ್ಕೆ ಪೆಡಲ್‌ ಪಂಪ್‌ನಿಂದ ಗಾಳಿತುಂಬಿಬಿಡುವುದು ಗಾಳಿಯನ್ನು ೬೫.೭೦ ಗೇಜ್‌ನಷ್ಟು ತುಂಬಿದರೆ ಸಾಕು. ತುಂಬಿಸುವಾಗ ಹೆಚ್ಚಾದರೆ ಅದು ತನ್ನಿಂದ ತಾನೆ ಹೊರಹೋಗಲು ಆಟೋಮೆಟಿಕ್ ಸೆಫ್ಟಿ ವಾಲ್ವ ಇದೆ. ಇವೆರಡೂ ವ್ಯವಸ್ಥೆಗಳೂ ತೀರ ಸರಳವಾದವುಗಳು. ಮಾಮೂಲಿ ಟ್ರಾಕ್ಟರ್ ಟ್ಯೂಬ್‌ಗೆ ಏರ್‌ಇನ್ ಟೇಕ್‌ವಾಲ್ವನ್ನೆ ಬಳಸಲಾಗಿದೆ. ಎಲ್ಲ ಸುಲಭ ಸರಳ ವ್ಯವಸ್ಥೆಯಿಂದ ಕೂಡಿದ ಇದಕ್ಕೆ ಸ್ಪ್ರೇಮಾಡುವ ವಾಲ್ವ್‌ ಕೂಡಾ ಇದೇ ರೀತಿ ಇದೆ. ಸ್ಪ್ರೇಯಲ್ಲಿ ೩ ವಿಧದಲ್ಲಿ ಸಿಂಪರಣೆ ಮಾಡಲು ಅವಕಾಶವಿದೆ. ಮಿಸ್ಟ್ ಸ್ಪ್ರೇ ಸೇರಿದಂತೆ ಬೇರೆ ಬೇರೆ ಸಿಂಪರಣೆ ಸಾಧ್ಯವಿದೆ. ಸಣ್ಣಗಿಡಕ್ಕೆ ಸಣ್ಣ ತರದಲ್ಲೂ ದೊಡ್ಡ ಗಿಡಗಳಿಗೆ ದೊಡ್ಡದಾಗಿಯೂ ಬೇಕಾದಂತೆ ಸ್ಪ್ರೇ ಮಾಡುವ ವ್ಯವಸ್ಥೆಗಳಿದ್ದು ದ್ರಾವಣ ಅನವಶ್ಯಕವಾಗಿ ವ್ಯಯವಾಗುವುದಿಲ್ಲ. ಇದಕ್ಕಾಗಿ ಸ್ಪ್ರೇಯರ್ ಟ್ಯಾಂಕಿಯಲ್ಲಿ ಕಂಟ್ರೋಲ್ ವಾಲ್ವ್‌ ಇದೆ. ಸ್ಯಾಪ್‌ಸ್ಯಾಕ್ ಸ್ಪ್ರೇಯರ್ ಆಗಿಯೂ, ಗಟೋರ್ ಸ್ಪ್ರೇಯ‌ರಾಗಿಯೂ ಪವರ್ ಸ್ಪ್ರೇಯರ್ ಆಗಿಯೂ ಬ್ಯಾಟರಿ ಸ್ಪ್ರೇಯರ್ ಆಗಿಯೂ ಇದು ರೈತರಿಗೆ ಇದು ಅತ್ಯಂತ ಅನುಕೂಲಕರವಾಗಿದೆ.

ಸ್ಪ್ರೇಯರ್ ಟ್ಯಾಂಕಿಯನ್ನು ಅನುಕೂಲಕ್ಕಾಗಿ ಎರಡು ಬಗೆಯಲ್ಲಿ ತಯಾರಿಸಲಾಗಿದೆ. ೧೬ ಗೇಜಿದ ಗ್ಯಾಲ್ವ್‌ನೈಸ್ಡ್ ಕಬ್ಬಿಣದಲ್ಲಿ ಮಾಡಿದ ಟ್ಯಾಂಕಿ ಒಂದಾದರೆ ಇನ್ನೊಂದು ಸ್ಟೀಲಿನದು. ದ್ರಾವಣ ಯಾವುದೇ ರೀತಿಯ ರಾಸಾಯನಿಕ ಕ್ರಿಯೆಗೆ ಹಾಳಾಗದಿರುವಂತೆ ರಬ್ಬರ್‌ಕೋಟ್ ಗಾಲ್ವಾ ಮತ್ತು ಪ್ಲಾಸ್ಟಿಕ್‌ಗಳಿಂದ ಕೋಟ್ ಮಾಡಲಾಗಿದ್ದು ಯಾವುದೇ ರಾಸಾಯನಿಕ ಪರಿಣಾಮಕ್ಕೆ ಒಳಪಡಲಾರದು. ಶಿವಾ ಆಗ್ರಿ ಸ್ಪ್ರೇಯರ್ ಎಂಬ ಬ್ರ್ಯಾಂಡಿನಲ್ಲಿ ಇದನ್ನು ತಯಾರಿಸಿ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದಂಡ ಬಂತವ್ವಾ ದಂಡ
Next post ಯಾವ ಕ್ಷಣದಲಿ ಯಾರೋ

ಸಣ್ಣ ಕತೆ

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…