ನಿಶ್ಚಿಂತನಾಗಬೇಕಂತೀ

ನಿಶ್ಚಿಂತನಾಗಬೇಕಂತೀ ಬಹು
ದುಶ್ಚಿಂತಿಯೊಳಗೇ ನೀ ಕುಂತೀ
ಯಾಕೋ ಎಲೋ ನಿನಗೀ ಭ್ರಾಂತೀ
ನಾಳಿಗಾಗುವದೀಗಂತೀ ||ಪ||

ಆಶಪಾಶಗಳ ಬ್ಯಾಡಂತಿ ವಳೆ
ಮೀಸಲ ನುಡಿ ಮಾತಾಡಂತೀ
ಭಾಷೆಕೊಟ್ಟು ತಪ್ಪಬ್ಯಾಡಂತೀ
ಹರಿದಾಸರೊಳಗೆ ಮನನೀಡಂತೀ ||೧||

ಅವರನು ಕಂಡರೆ ಅವರಂತೆ
ಮತ್ತಿವರನು ಕಂಡರೆ ಇವರಂತೆ
ಅವರವರರಿಯದೆ ತನಗೂ ತಿಳಿಯದೆ
ಮೂಢನಾಗಿ ಸುಮ್ಮನೆ ಕುಂತೀ ||೨||

ಪೊಡವಿಯೊಳಗೆ ಶಿಶುನಾಳಂತೀ
ದೃಢಗೋವಿಂದಯೋಗಿಯ ಚಿಂತೀ
ಬಿಡದಾತನ ಸೇವೆ ಮಾಡಂತೀ
ಭಯವಿಲ್ಲದ ಗುರುವಿನ ಕೂಡಂತೀ ||೩||

****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಿಂಗದೊಳಗೆ ಮನವಿಡದಿನ್ನಾ
Next post ಬೆಳಗಾಗುವ ತನಕ ಕುಳಿತುನೋಡು

ಸಣ್ಣ ಕತೆ

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

cheap jordans|wholesale air max|wholesale jordans|wholesale jewelry|wholesale jerseys