Home / ಕವನ / ಕವಿತೆ / ಶಾಂತಿ ಸಮರಸದ ತೊರೆಯಲ್ಲಿ

ಶಾಂತಿ ಸಮರಸದ ತೊರೆಯಲ್ಲಿ

“ಒಂದೇತ್ ಜಗತ್ ಭೂಷಣೆ ಸುವರ್‍ಣ ಚೇತನವೇ
ಜಗದಾತ್ರಿ ದಾತೆಯೆ ಶರಣೆಂಬೆವೂ ನಿನಗೆ ಮಾತೆಯೆ
ಕರ ಮುಗಿವೆವು ನಿನಗೆ”
ಜನನಿಽಽ ಜಗದಾತ್ರೆಯೆ
ಓಂ ಶಾಂತಿಃ ಓಂ ಶಾಂತಿಃ

ಶಾಂತಿ ಸಮರಸದ ತೊರೆಯಲ್ಲಿ
ಭದ್ರ ಬುನಾದಿಯ ಸೆರೆಯಲ್ಲಿ
ಸನಾತನ ಸಮನ್ವಯ ಗುಡಿಯೊಳಗಣ ಮೂರ್‍ತವೆ ಇಲ್ಲಿ
ಹೇಳೇಳು ಮನವೇ ದನಿ ಗೂಡಿ ಹೇಳು
ಭಾರತ ಮಾತೆಗೆ ಜಯವಾಗಲಿ
ಜಯ ಜಯಹೇ ಜಯ ಜಯಹೇ ||

ಭಾತೃತ್ವದ ತುಂಬು ದೋಣಿಯಲ್ಲಿ
ಮಮತೆಯ ಮಡಿಲಂದದಿ ತೂಗಿ
ಮುನ್ನಡೆದಿದೆ ಜೀವನ ಕಣ್ಸೆಳೆದಿದೆ ಹೂಮನ
ಹೇಳೀಳು ಮನವೇ ದನಿ ಗೂಡಿ ಹೇಳು
ಭಾರತ ಮಾತೆಗೆ ಜಯವಾಗಲಿ
ಜಯ ಜಯಹೇ ಜಯ ಜಯಹೇ ||

ವರ್ತಮಾನದ ವೈಭವ ಶಿಖರಕೇರಿ
ಭೂತ ಭವಿಷ್ಯತೆಯ ಕರತಾಳದಲ್ಲಿ ಕೂಡಿ
ಮಾನವತೆಯ ನಮ್ರತೆಯ ಭಾವನ ಸ್ವರ ತಾಳದಲ್ಲಿ
ಹೇಳೀಳು ಮನವೇ ದನಿಗೂಡಿ ಹೇಳು
ಭಾರತ ಮಾತೆಗೆ ಜಯವಾಗಲಿ
ಜಯ ಜಯಹೇ ಜಯ ಜಯಹೇ ||

ಶುಭ್ರತೆಯ ಕೀರ್ತಿ ಹೊಸ್ತಿಲಲ್ಲಿ ಉಜ್ವಲ ಅಮರತ್ವದಡಿಯಲಿ
ಹಸನಾಗಿಹ ಕೀರ್ತಿ ಹೊಸ್ತಿಲಲ್ಲಿ ಉಜ್ವಲ ಅಮರತ್ವದಡಿಯಲಿ
ಐಕ್ಯತೆಯ ಹಿರಿಮೆಯಲಿ ನಲಿದಾಡಿಹುವುದು ಹೂಮನ
ಭವ್ಯತೆಯ ಸೋಗಿನಲಿ ಹೇಳೇಳು ಮನವೇ ದನಿಗೂಡಿಹೇಳು
ಭಾರತ ಮಾತೆಗೆ ಜಯವಾಗಲಿ
ಜಯ ಜಯಹೇ ಜಯ ಜಯಹೇ ||

ಋಷ್ಯ ಮುಖ ಕಲ್ಪತರು ಗರಿಮೆಯ ತಾಣದಲ್ಲಿ
ಶಿಲ್ಪ ಸೌಂದರ ಮೇಳೈಸುವ ಆಗರದಲ್ಲಿ
ಭಾರತೀಯ ಹೃತ್ಕಮಲಕೆ ತಲೆಬಾಗಿ ಹಾಡಿ
ಹೇಳೇಳು ಮನವೆ ದನಿಗೂಡಿ ಹೇಳು
ಭಾರತ ಮಾತೆಗೆ ಜಯವಾಗಲಿ
ಜಯ ಜಯಹೇ ಜಯ ಜಯಹೇ ||
*****

Tagged:

Leave a Reply

Your email address will not be published. Required fields are marked *

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...