Home / ಕವನ / ಕವಿತೆ / ಶರಣೆಂಬೆವು

ಶರಣೆಂಬೆವು

ಶರಣೆಂಬೆವು ತಾಯಿ ಶರಣೆಂಬೆವು
ಶರಣಾಗತರಾಗಿಹೆವು ರಕ್ಷಿಸೆಮ್ಮನು
ಕರಮುಗಿದು ಬೇಡುವೆವು ವರವೊಂದನು ||

ಭುವನೇಶ್ವರಿಯೆ ತಾಯೆ ರಾಜ ರಾಜೇಶ್ವರಿಯೆ
ಕರುನಾಡ ತಾಯೆ ಕರುಣೆಯ ತೋರು
ಕರಮುಗಿದು ಬೇಡುವೆವು ವರವೊಂದನು ||

ನಿನ್ನ ಕರುಣೆಯೆ ನಮಗೆ ಶ್ರೀ ರಕ್ಷೆ
ನಿನ್ನೆದೆಯ ಭಾವವೆ ಅಭಯ ದೀಕ್ಷೆ
ನಿನ್ನ ಮಮತೆಯೆ ದಯಾದೀನವೂ
ಕರಮುಗಿದು ಬೇಡುವೆವು ವರವೊಂದನು
ಶರಣಾಗತರಾಗಿಹೆವು ರಕ್ಷಿಸೆಮ್ಮನು ||

ತಂಬಿಟ್ಟು ಹೋದಾವರೆ ನಿನಗರ್‍ಪಿಸಿ
ಕರ್‍ಪೂರದಾರತಿ ಮಾಡಿ ಮನದಿಂದೆ
ಭಕುತರ ಹರಸಿ ನೀ ಮನದಿಂದೆ
ಕರಮುಗಿದು ಬೇಡುವೆವು ವರವೊಂದನು
ಶರಣಾಗತರಾಗಿಹೆವು ರಕ್ಷಿಸೆಮ್ಮನು ||

ಬನಶಂಕರಿ ಮಹಾಮಾಯೆ ಮಾಹೇಶ್ವರಿ
ಜಗಧಾತ್ರೆ ರಕ್ಷಿಸಿ ಕರುಣೆ ತೋರು
ಶರಣಾಗತರಾಗಿಹೆವು ರಕ್ಷಿಸೆಮ್ಮನು ||
ಕಬ್ಬಿನ ಜಲ್ಲೆ ರಸದೌತಣ ನೈವೇದ್ಯ ನಿನಗರ್‍ಪಿಸಿ
ಮಲ್ಲೆ ಹೂಮಾಲೆ ಮುಡಿಪಾಗಿರಿಸಿ
ಜಗದಂಭಾ ಸ್ವರೂಪಿಣಿ ನಿನ್ನ ಲೀಲೆಯಲಿ
ಹೊನ್ನ ಹೂವುಗಳಾಗಿ ನಲಿವೆವು ನಿನ್ನ ಚರಣದಲಿ
ಕರ ಮುಗಿದು ಬೇಡುವೆವು ವರವೊಂದನು
ಶರಣಾಗಿಹೆವು ರಕ್ಷಿಸೆಮ್ಮನು ||

ಏಳೇಳು ಜನ್ಮಕೂ ನಿನ್ನ ಸೇವೆಯಲಿ
ಮುಡುಪಾಗಿರಿಸು ಎಮ್ಮನು ನಿನ್ನ ಮಣ್ಣಲಿ
ಚೈತನ್ಯವಾಗಿರಿಸಿ ಹರಸು ತಾಯೆ ಮಡಿಲ ಮಕ್ಕಳ
ಕರ ಮುಗಿದು ಬೇಡುವೆವು ಕರುಣೆಯಿಂದಲಿ
ನೀಡು ವರವೊಂದನು ||
*****

Tagged:

Leave a Reply

Your email address will not be published. Required fields are marked *

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...