ಶರಣೆಂಬೆವು

ಶರಣೆಂಬೆವು ತಾಯಿ ಶರಣೆಂಬೆವು
ಶರಣಾಗತರಾಗಿಹೆವು ರಕ್ಷಿಸೆಮ್ಮನು
ಕರಮುಗಿದು ಬೇಡುವೆವು ವರವೊಂದನು ||

ಭುವನೇಶ್ವರಿಯೆ ತಾಯೆ ರಾಜ ರಾಜೇಶ್ವರಿಯೆ
ಕರುನಾಡ ತಾಯೆ ಕರುಣೆಯ ತೋರು
ಕರಮುಗಿದು ಬೇಡುವೆವು ವರವೊಂದನು ||

ನಿನ್ನ ಕರುಣೆಯೆ ನಮಗೆ ಶ್ರೀ ರಕ್ಷೆ
ನಿನ್ನೆದೆಯ ಭಾವವೆ ಅಭಯ ದೀಕ್ಷೆ
ನಿನ್ನ ಮಮತೆಯೆ ದಯಾದೀನವೂ
ಕರಮುಗಿದು ಬೇಡುವೆವು ವರವೊಂದನು
ಶರಣಾಗತರಾಗಿಹೆವು ರಕ್ಷಿಸೆಮ್ಮನು ||

ತಂಬಿಟ್ಟು ಹೋದಾವರೆ ನಿನಗರ್‍ಪಿಸಿ
ಕರ್‍ಪೂರದಾರತಿ ಮಾಡಿ ಮನದಿಂದೆ
ಭಕುತರ ಹರಸಿ ನೀ ಮನದಿಂದೆ
ಕರಮುಗಿದು ಬೇಡುವೆವು ವರವೊಂದನು
ಶರಣಾಗತರಾಗಿಹೆವು ರಕ್ಷಿಸೆಮ್ಮನು ||

ಬನಶಂಕರಿ ಮಹಾಮಾಯೆ ಮಾಹೇಶ್ವರಿ
ಜಗಧಾತ್ರೆ ರಕ್ಷಿಸಿ ಕರುಣೆ ತೋರು
ಶರಣಾಗತರಾಗಿಹೆವು ರಕ್ಷಿಸೆಮ್ಮನು ||
ಕಬ್ಬಿನ ಜಲ್ಲೆ ರಸದೌತಣ ನೈವೇದ್ಯ ನಿನಗರ್‍ಪಿಸಿ
ಮಲ್ಲೆ ಹೂಮಾಲೆ ಮುಡಿಪಾಗಿರಿಸಿ
ಜಗದಂಭಾ ಸ್ವರೂಪಿಣಿ ನಿನ್ನ ಲೀಲೆಯಲಿ
ಹೊನ್ನ ಹೂವುಗಳಾಗಿ ನಲಿವೆವು ನಿನ್ನ ಚರಣದಲಿ
ಕರ ಮುಗಿದು ಬೇಡುವೆವು ವರವೊಂದನು
ಶರಣಾಗಿಹೆವು ರಕ್ಷಿಸೆಮ್ಮನು ||

ಏಳೇಳು ಜನ್ಮಕೂ ನಿನ್ನ ಸೇವೆಯಲಿ
ಮುಡುಪಾಗಿರಿಸು ಎಮ್ಮನು ನಿನ್ನ ಮಣ್ಣಲಿ
ಚೈತನ್ಯವಾಗಿರಿಸಿ ಹರಸು ತಾಯೆ ಮಡಿಲ ಮಕ್ಕಳ
ಕರ ಮುಗಿದು ಬೇಡುವೆವು ಕರುಣೆಯಿಂದಲಿ
ನೀಡು ವರವೊಂದನು ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಡಂಭಗಳೇಕೆ!
Next post ಅಲ್ಲಮ

ಸಣ್ಣ ಕತೆ

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…