Home / ಕವನ / ಕವಿತೆ / ಕನ್ನಡಾಂಬೆ ಮೆರವಣಿಗೆ

ಕನ್ನಡಾಂಬೆ ಮೆರವಣಿಗೆ

ಹೊರಟೈತೆ ಮೆರವಣಿಗೆ
ನಮ್ಮೂರಿಗೆ ಭೂದೇವಿ
ಸಿರಿದೇವಿ ವನದೇವಿ
ಮುತ್ತಿನಾರತಿ ಎತ್ತಿರೆ ಕನ್ನಡಾಂಬೆಗೆ ||

ಬರುತಾಳೆ ಕಾವೇರಮ್ಮ
ಕಾಲ್ ತೊಳೆಯೆ ನಿನ್ನ ….
ನಿನ್ನ ಮಕ್ಕಳ ಹರಸಮ್ಮ
ಜಗದಾಂಬೆ ಕನ್ನಡಾಂಬೆಯೆ ||

ನಿನ್ನ ಹೃದಯಂಗಳದಿ
ಹಸಿರ ತಂಪೆರೆಯಲಿ
ಹೋಲಗದ್ದೆಗಳೆ ಗುಡಿಗೋಪುರ
ರೈತ ಹೈಕಳ ಜೋಡಿ ನಿನ್ನ ಪೂಜಾರಿ
ನೇಗಿಲು ಹಲುಬೆಗಳೆ ಪೂಜಾಸಾಮಗ್ರಿ

ಹೂಗೊಂಚಲ ತರುಲತೆ ಶೃಂಗಾರಾಭರಣ
ಸೂರ್‍ಯ ಚಂದ್ರರೆ ಕರ್‍ಣದೋಲೆಗಳು
ಬೆಳ್ಳಿ ಶಿಖರಗಳೇ ಕಿರೀಟವು
ಮುತ್ತೈದೆ ವೀರಗಾಥೆಯೆ ತಿಲಕ

ಪಚ್ಚೆತೆನೆ ಧವಸಧಾನ್ಯ ನೈವೇದ್ಯ
ಕಬ್ಬಿನ ಜಲ್ಲೆ ಜೇನ ಕಣ ಅಭಿಷೇಕಾಮೃತ
ನಿನ್ನ ಮಕ್ಕಳ ಬೆವರ ಹನಿಯೆ
ಭಕ್ತಿಯ ಸ್ಮರಣೆ ಕರ್‍ಪೂರದಾರತಿ ||

ಇಳಿಯೆಂಬ ಹೊಸ್ತಿಲಲ್ಲಿ ಅಂಬರವೇ
ಪುಷ್ಪಕ ವಿಮಾನ ಲತಾಮಂಟಪ
ಸುಗ್ಗಿಯ ಸೊಬಗೇ ನಿನ್ನ ತೇರು
ಋತುಗಳೆ ತೇರನ್ನೆಳೆಯುವ ದಾತರು
ಸಂಸ್ಕೃತಿ ಸಂಪನ್ನಗಳೆ ಶ್ವೇತಾಂಬರ ರವಿಕೆ
ಶ್ರೀ ಗಂಧವೆ ಧೂಪ ತರಂಗಿಣಿ ಸೆಲೆಯೆ ತೀರ್‍ಥ

ಸಂವತ್ಸರಗಳೆ ನಿನಗೆ ಸುಪ್ರಭಾತ
ಸಂಧ್ಯಾರಾಗ ಸಮತಾಭಾವ ನಿನಗೋಕುಳಿ
ಸದ್ಗುಣ ಜ್ಞಾನಾರ್‍ಜನೆಯೆ ದೀವಿಗೆ
ಕೋಕಿಲ ಗಾನವೇ ಮಂತ್ರಾರ್‍ಚನೆ
ಪವನದೇವ ಪಂಖ ಬೀಸಲು ||

ಕೊಂಬು ಕಂಸಾಳೆ ಡೋಲು
ದುಡಿ ಮದ್ದಲೆ ದುಂದುಭಿ
ನಾಗಸ್ವರ ಮೇಳ ಹಿಮ್ಮೇಳವು
ದೇವ ಕಿನ್ನರಿ ಜವ್ವನೆಯರ ನರ್ತನ
ವೈಭವದಿಂದ ಬರುತಿರೆ ಮೆರವಣಿಗೆ ||

ನೋಡಲು ಕಣ್ಣುಗಳು ಸಾಲದಮ್ಮ
ನಿನ್ನ ವರ್‍ಣಿಸಲು ಅಸದಳವು
ಮುತ್ತೈದೆಯರು ಮುತ್ತಿನಾರತಿ ಎತ್ತಿರೆ
ತಾಯೆ ಸಿರಿದೇವಿಗೆ ತೇಲಿಬಾಗಿ
ನಮಿಸಿರೆ ಕನ್ನಡಾಂಬೆಗೆ ||
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...