Home / ಕವನ / ಕವಿತೆ / ಮನದ ಮಾತು

ಮನದ ಮಾತು

ಎಲ್ಲೆಲ್ಲಿಯೂ ಮನದ ಮಾತುಗಳೆ ಮುಂಬರಿದು
ಎದೆಯ ಕೊಳಲುಲಿಯನೇ ಕೇಳಗೊಡವು !

ಹಗಲೆಲ್ಲವೂ ಜಿನುಗುತಿಹುದೆ ಮನಸಿನ ವಾಯ,
ತೆಗೆವುದೊಂದೊಂದು ಸಲ ಎದೆಯು ಬಾಯ ;
ಎಣಿಕೆಯಿಲ್ಲದೆ ಬಣಗುನುಡಿಯ ಹೆಣೆವುದು ಮನಸು,
ಎದೆಯದೊಂದೇ ಒಂದು ಪದವೆ ಸವಿಗನಸು !

ಕಾಗೆ- ಗೂಗೆಗಳ ಕೂಗಾಟ- ಕಿರುಚಾಟದಲಿ
ರಾಗಿಸುವ ವೀಣೆಯುಲಿ ಅಡಗಿರುವುದು ;
ನೆರೆದ ಮಂದಿಯ ಬೀದಿಗಲಹದಾ ಕಲಕಲದಿ
ತಾಯ ಜೋಗುಳವಾಡು ಹುದುಗಿರುವುದು.

ಸೂಳೆಯರ ಸಂಗೀತ ಗಟ್ಟಿಗೊಂಡಿಡಿದಿರಲು
ತಿಂಗಳಿನ ಮೌನಗಾನವು ಹೋಯ್ತು ಹೂತು ;
ಡೋಳು- ಹರೆ-ಕೊಂಬುಗಳ ಬಿರುದನಿಯು ಕಿವಿದುಂಬಿ
ಬಾಲಕನ ಲಲ್ಲೆನುಡಿ ಹೋಯ್ತು, ಬೀತು !

ಸಿಡಿಲು- ಮಿಂಚುಗಳ ಗುಡುಗಾಟ ಮರೆಮಾಡಿಹುದು.
ಮಡದಿಯಾ ಮೆಲುನುಡಿಯ ಪ್ರಣಯದಾಟ ;
ಮೊರೆದು ಭೋರ್‍ಗರೆವ ಕಡಲಲಿ ಹುದುಗಿಕೊಂಡಿಹುದು
ನೊರೆವಾಲಿನೊಂದು ಕಿರಿಯೊರತೆಯಕಟ !

ಬನದರಳ ಕಂಪ ತೊಂಗಲನು ತಳೆದಿರುವೆಲರು
ಸುಳಿಯುತಿರೆ ಪಾರಿಜಾತಕದ ಮೆಲುಗಂಪು
ನಡುನಡುವೆ ತಲೆದೋರಿ ತಡೆದು ತಣಿವಿತ್ತಂತೆ
ನುಡಿಯು ಒಂದೊಂದು ಸಲ ಕೇಳಿಸುವುದಿಂಪು !

ಕೊಳೆಯ ನೆಲೆವೀಡಾದ ಒಡಲಿನೊಳಗನು ಮರೆದು,
ಚೆಲುವನೇ ಕಣ್ಣುಗಳು ಮೆಚ್ಚುವಂತೆ …
ಬಲೆಬಲೆಯ ನುಡಿಯುಳಿದು ರಸಿಕ ಕಬ್ಬದ ಜೀವ-
ಕಳೆಯನೇ ಕಂಡುಂಡು ಹೆಚ್ಚುವಂತೆ-

ಮನದ ಮಾತಿನೊಳು ಮರೆಗೊಂಡಿರುವ ಎದೆಯುಲಿಯು
ಅನುದಿನವು ಕೇಳುತಿರುವೊಲು ಕಿವಿಯನು …
ಅಣಿಗೊಳಿಪೆನೆಂತೆನುತ ನೆನೆವೆನಾವಾಗಲೂ
ಮನದ ಮಾತಿಗೆ ಕೊನೆಯೆ ಇಲ್ಲವೇನು ?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...