Home / ಕವನ / ಕವಿತೆ / ಮನದ ಮಾತು

ಮನದ ಮಾತು

ಎಲ್ಲೆಲ್ಲಿಯೂ ಮನದ ಮಾತುಗಳೆ ಮುಂಬರಿದು
ಎದೆಯ ಕೊಳಲುಲಿಯನೇ ಕೇಳಗೊಡವು !

ಹಗಲೆಲ್ಲವೂ ಜಿನುಗುತಿಹುದೆ ಮನಸಿನ ವಾಯ,
ತೆಗೆವುದೊಂದೊಂದು ಸಲ ಎದೆಯು ಬಾಯ ;
ಎಣಿಕೆಯಿಲ್ಲದೆ ಬಣಗುನುಡಿಯ ಹೆಣೆವುದು ಮನಸು,
ಎದೆಯದೊಂದೇ ಒಂದು ಪದವೆ ಸವಿಗನಸು !

ಕಾಗೆ- ಗೂಗೆಗಳ ಕೂಗಾಟ- ಕಿರುಚಾಟದಲಿ
ರಾಗಿಸುವ ವೀಣೆಯುಲಿ ಅಡಗಿರುವುದು ;
ನೆರೆದ ಮಂದಿಯ ಬೀದಿಗಲಹದಾ ಕಲಕಲದಿ
ತಾಯ ಜೋಗುಳವಾಡು ಹುದುಗಿರುವುದು.

ಸೂಳೆಯರ ಸಂಗೀತ ಗಟ್ಟಿಗೊಂಡಿಡಿದಿರಲು
ತಿಂಗಳಿನ ಮೌನಗಾನವು ಹೋಯ್ತು ಹೂತು ;
ಡೋಳು- ಹರೆ-ಕೊಂಬುಗಳ ಬಿರುದನಿಯು ಕಿವಿದುಂಬಿ
ಬಾಲಕನ ಲಲ್ಲೆನುಡಿ ಹೋಯ್ತು, ಬೀತು !

ಸಿಡಿಲು- ಮಿಂಚುಗಳ ಗುಡುಗಾಟ ಮರೆಮಾಡಿಹುದು.
ಮಡದಿಯಾ ಮೆಲುನುಡಿಯ ಪ್ರಣಯದಾಟ ;
ಮೊರೆದು ಭೋರ್‍ಗರೆವ ಕಡಲಲಿ ಹುದುಗಿಕೊಂಡಿಹುದು
ನೊರೆವಾಲಿನೊಂದು ಕಿರಿಯೊರತೆಯಕಟ !

ಬನದರಳ ಕಂಪ ತೊಂಗಲನು ತಳೆದಿರುವೆಲರು
ಸುಳಿಯುತಿರೆ ಪಾರಿಜಾತಕದ ಮೆಲುಗಂಪು
ನಡುನಡುವೆ ತಲೆದೋರಿ ತಡೆದು ತಣಿವಿತ್ತಂತೆ
ನುಡಿಯು ಒಂದೊಂದು ಸಲ ಕೇಳಿಸುವುದಿಂಪು !

ಕೊಳೆಯ ನೆಲೆವೀಡಾದ ಒಡಲಿನೊಳಗನು ಮರೆದು,
ಚೆಲುವನೇ ಕಣ್ಣುಗಳು ಮೆಚ್ಚುವಂತೆ …
ಬಲೆಬಲೆಯ ನುಡಿಯುಳಿದು ರಸಿಕ ಕಬ್ಬದ ಜೀವ-
ಕಳೆಯನೇ ಕಂಡುಂಡು ಹೆಚ್ಚುವಂತೆ-

ಮನದ ಮಾತಿನೊಳು ಮರೆಗೊಂಡಿರುವ ಎದೆಯುಲಿಯು
ಅನುದಿನವು ಕೇಳುತಿರುವೊಲು ಕಿವಿಯನು …
ಅಣಿಗೊಳಿಪೆನೆಂತೆನುತ ನೆನೆವೆನಾವಾಗಲೂ
ಮನದ ಮಾತಿಗೆ ಕೊನೆಯೆ ಇಲ್ಲವೇನು ?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...