ಮಾಟಗಾರ್‍ತಿ

ಬಾಡದಿರುವಲರಂತ ಬಗೆಯನ್ನು ಮಾಡಿದರೆ
ಬೈಯುವೆನೆ ನಿನ್ನ ತಾಯೇ ?
ಹಾಡುತಿಹ ಕೊಳಲಂತ ಕೊರಳನ್ನು ಮಾಡಿದರೆ
ಕುಂದಿಡುವನೇನು ತಾಯೇ ?

ಮೂಡುವಾ ನೇಸರಿನ ತರ ಮೆಯ್ಯ ಮಾಡಿದರೆ
ಮುಚ್ಚರಿಪರಾರು ತಾಯೇ,
ಕೋಡುಗಲ್ಲಂತೆನ್ನ ಮನವ ನೆಲೆನಿಲಿಸಿದರೆ
ಮುನಿವೆನೇ ಲೋಕಮಾಯೆ?

ಆದೊಡೇನು ?
ಖೋಡಿ ಕೊರಡಿನ ತರದಿ ಬರುಬಗೆಯ ಗೈದಿರಲು
ಬೆಂದು ಬೈಯುವೆನೆ ತಾಯೇ,
ಕಾಡ ಬಿದುರಿನ ಕೊಳವಿಯಂತೆ ಕೊರಳಿರ್‍ದುದಕೆ
ಕುಂದಿಡುವೆನಿಂದು ತಾಯೆ !

ಮೋಡ ಮುಸುಕಿದ ಪೆರೆಯ ತೆರ ಮೈಯ ನೀಡಿರುವೆ
ಮಚ್ಚರಿಪೆನದಕೆ ತಾಯೆ,
ಕಾಡುವಾ ಕೋಡಿಗನ ತೆರ ಮನವ ಮಾಡಿರುವೆ,
ಮುನಿಸದರೆ ಪ್ರಕೃತಿಮಾಯೆ!

ಮಾಡದುದ ಮಾಡಿ ನೀನಾಡುತಾಟಗಳನ್ನು
ಬಿನದಿಸುವ ಆಟಗಾರ್‍ತಿ !
ಮಾಡುವುದ ಮಾಡದೆಯೆ ಓಡಾಡಿಸುವೆ ಜೀವ-
ಜಡಗಳನು ಮಾಟಗಾರ್‍ತಿ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸೇವೆ ಮಾಡುವರು ಬೇಕಾಗಿದೆ
Next post ಪ್ರತೀಕ್ಷಾ-ಸಮಾಧಿ

ಸಣ್ಣ ಕತೆ

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

cheap jordans|wholesale air max|wholesale jordans|wholesale jewelry|wholesale jerseys