Home / ಕವನ / ಕವಿತೆ / ನಾವಾಡಿಗ!

ನಾವಾಡಿಗ!

ಮಳೆಗಾಲದ ನೀರಹೊಳೆಯನ್ನು ದಾಟಿಸಲು ಅಂಬಿಗರಣ್ಣ ಅರಿತವನಾದರೆ, ಅಳಿಗಾಲದ ಬಾಳಹೊಳೆಯನ್ನು ದಾಂಟಿಸಲು ಬಲ್ಲಿದರಾರು?

ನಡುಹೊಳೆಯ ನಡುವಿನೊಳು ತೊಡಕಿ ಮಿಡುಕುತಲಿಹೆನು,
ತಡೆಯದಲೆ ತೋರು ನೀ ತಡಿಯ ತಲುಪುವ ಹದನು !


‘ನನ್ನ ನುಡಿ ಮನ್ನಿಸದೆ ಬೀಳದಿರು ! ಈ ಹೊಳೆ-
ಮುನ್ನ ಬಲ್ಲಿದರ ಹಲವರ ಬಳಲಿಸಿಹುದೋ!’
ಎನ್ನುತೆಳ್ಚರಿಸಿರುವ ನಿನ್ನ ನುಡಿ ಹೀಗಳೆದು
ನನ್ನ ಬಲುಹಿನ ಗರುವದಲಿ ಹೊಳೆಗೆ ಹಾರಿಹೆನು!


‘ನಸುವೇಳೆ ತಾಳು, ನಾ ಹೇಳುವುದ ನೀ ಕೇಳು!
ಗಸಣೆಗೊಳಿಸದೆ ಹೊಳೆಯ ದಾಂಟಿಸುವೆ’ ಎಂದೆಯೈ!
ಕಸಕೆ ಸರಿಯೆಣಸಿದೆನು ನಿನ್ನ ನಲ್‌ನುಡಿಗಳನು,
ಮಸಣದೀ ದಾರಿಯೊಳು ಅಡಿಗಳನು ಚೆಲ್ಲಿಹೆನು.


‘ಬೀಳದಿರು, ಬೀಳದಿರು! ಹಿಂದಿರುಗು, ಸರಿ, ಮರಳು!
ಕೇಳೆನ್ನ ವಚನ ಬಾಳುವೆ ಬಹಳ ದಿವಸಗಳು!’
ಹೇಳಿದೆಯೊ ಇಂತು ನಡುಹೊಳೆಯ ಸೇರುವ ವರೆಗು-
ಮೂಳ ನಿಜ ನಾನು ಗಣಿಸದೆ ಹೊಳೆಯ ಹೊಕ್ಕಿಹೆನು!


ನನ್ನ ತೋಳುಗಳ ತಿರುಳನ್ನು ತೊರೆಯನ್ನೀಸಿ
ನಿನ್ನೆದುರು ತೋರಿಸುತ ಮೂದಲಿವೆನೆಂದಿದ್ದೆ;
ಮುನ್‌ನೋಡಿ ತಿಳಿಯದೇ ಬನ್ನದಲಿ ಬಿದ್ದಿಹೆನು,
ಮನ್ನಿಸೆನ್ನಯ ಮೊರೆಯ ಅಣ್ಣ ನಾವಿಕ, ಪೊರೆಯೊ!


ಬಡಿದಾಡಿ ನೀರಿನೊಳು ಬಳಲಿಹವು ಕೈ ಕಾಲು;
ಅಡಿಗಡಿಗೆ ಮೂಗು-ಕಣ್-ಕಿವಿಗಳಿಗೆ ನೀರೇರಿ,
ಕುಡಿಯುತಲಿಹೆ ಒಡಲು ಒಡೆಯುವೊಲು ಕದಡನ್ನು
ನಡುಹೊಳೆಗೆ ಬರಲೀಗ, ದಡದಡಿಸುತಿಹೆನು!


ಕ್ರೂರಜಲಜಂತುಗಳು ನೀರಸುಳಿ ತೆರೆತೆರೆಯು
ತೋರೆ ಭೀತಿಯೊಳು ಗುಡುಗಾಡುತಿದೆ ನನ್ನೆದೆಯು!
ಧೀರ, ನಿನ್ನಯ ನುಡಿಯ ಮಾರಿ ನಾ ನಡೆದುದನು
ತಾರದೆಯೆ ಮನದಲ್ಲಿ ತಾರಿಸುವುದೆನ್ನನು!


ಮೂಢನೊಬ್ಬನು ಹಿರಿಯರಾಡಿದುದನೆಣಿಸದೇ
ಖೋಡಿನಂದದಿ ನಡೆದು ಕೇಡಿಗೊಳಗಾಗಿರಲು,
ಖೋಡಿಗಳೆದವ ನಮ್ಮ ನುಡಿಯನೆಂದಾತನನು
ನೋಡಿಯೂ ನೋಡದಾ ತೆರ ಸುಮ್ಮಗಿರುವರೆ ?


ಹಲವು ಸಲ ದಾಂಟಿಹೆಯೊ, ಹೊಳೆಯಾಳ ತಿಳಿದಿಹೆಯೊ,
ಸುಲಭದಲಿ ಹಲವು ಜನರನು ಪಾರು ಮಾಡಿಹೆಯೊ!
ತಲುಪಿಸೈ ತಡಿಗೆನ್ನ ಚೆಲುವ ಅಂಬಿಗರಣ್ಣ,
ಬಲುಮೆಯಿಂದಲಿ ನನ್ನ ಬಳಗದೊಳು ಕೂಡಿಸೈ!
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...