Home / ಕವನ / ಕವಿತೆ / ನಾವಾಡಿಗ!

ನಾವಾಡಿಗ!

ಮಳೆಗಾಲದ ನೀರಹೊಳೆಯನ್ನು ದಾಟಿಸಲು ಅಂಬಿಗರಣ್ಣ ಅರಿತವನಾದರೆ, ಅಳಿಗಾಲದ ಬಾಳಹೊಳೆಯನ್ನು ದಾಂಟಿಸಲು ಬಲ್ಲಿದರಾರು?

ನಡುಹೊಳೆಯ ನಡುವಿನೊಳು ತೊಡಕಿ ಮಿಡುಕುತಲಿಹೆನು,
ತಡೆಯದಲೆ ತೋರು ನೀ ತಡಿಯ ತಲುಪುವ ಹದನು !


‘ನನ್ನ ನುಡಿ ಮನ್ನಿಸದೆ ಬೀಳದಿರು ! ಈ ಹೊಳೆ-
ಮುನ್ನ ಬಲ್ಲಿದರ ಹಲವರ ಬಳಲಿಸಿಹುದೋ!’
ಎನ್ನುತೆಳ್ಚರಿಸಿರುವ ನಿನ್ನ ನುಡಿ ಹೀಗಳೆದು
ನನ್ನ ಬಲುಹಿನ ಗರುವದಲಿ ಹೊಳೆಗೆ ಹಾರಿಹೆನು!


‘ನಸುವೇಳೆ ತಾಳು, ನಾ ಹೇಳುವುದ ನೀ ಕೇಳು!
ಗಸಣೆಗೊಳಿಸದೆ ಹೊಳೆಯ ದಾಂಟಿಸುವೆ’ ಎಂದೆಯೈ!
ಕಸಕೆ ಸರಿಯೆಣಸಿದೆನು ನಿನ್ನ ನಲ್‌ನುಡಿಗಳನು,
ಮಸಣದೀ ದಾರಿಯೊಳು ಅಡಿಗಳನು ಚೆಲ್ಲಿಹೆನು.


‘ಬೀಳದಿರು, ಬೀಳದಿರು! ಹಿಂದಿರುಗು, ಸರಿ, ಮರಳು!
ಕೇಳೆನ್ನ ವಚನ ಬಾಳುವೆ ಬಹಳ ದಿವಸಗಳು!’
ಹೇಳಿದೆಯೊ ಇಂತು ನಡುಹೊಳೆಯ ಸೇರುವ ವರೆಗು-
ಮೂಳ ನಿಜ ನಾನು ಗಣಿಸದೆ ಹೊಳೆಯ ಹೊಕ್ಕಿಹೆನು!


ನನ್ನ ತೋಳುಗಳ ತಿರುಳನ್ನು ತೊರೆಯನ್ನೀಸಿ
ನಿನ್ನೆದುರು ತೋರಿಸುತ ಮೂದಲಿವೆನೆಂದಿದ್ದೆ;
ಮುನ್‌ನೋಡಿ ತಿಳಿಯದೇ ಬನ್ನದಲಿ ಬಿದ್ದಿಹೆನು,
ಮನ್ನಿಸೆನ್ನಯ ಮೊರೆಯ ಅಣ್ಣ ನಾವಿಕ, ಪೊರೆಯೊ!


ಬಡಿದಾಡಿ ನೀರಿನೊಳು ಬಳಲಿಹವು ಕೈ ಕಾಲು;
ಅಡಿಗಡಿಗೆ ಮೂಗು-ಕಣ್-ಕಿವಿಗಳಿಗೆ ನೀರೇರಿ,
ಕುಡಿಯುತಲಿಹೆ ಒಡಲು ಒಡೆಯುವೊಲು ಕದಡನ್ನು
ನಡುಹೊಳೆಗೆ ಬರಲೀಗ, ದಡದಡಿಸುತಿಹೆನು!


ಕ್ರೂರಜಲಜಂತುಗಳು ನೀರಸುಳಿ ತೆರೆತೆರೆಯು
ತೋರೆ ಭೀತಿಯೊಳು ಗುಡುಗಾಡುತಿದೆ ನನ್ನೆದೆಯು!
ಧೀರ, ನಿನ್ನಯ ನುಡಿಯ ಮಾರಿ ನಾ ನಡೆದುದನು
ತಾರದೆಯೆ ಮನದಲ್ಲಿ ತಾರಿಸುವುದೆನ್ನನು!


ಮೂಢನೊಬ್ಬನು ಹಿರಿಯರಾಡಿದುದನೆಣಿಸದೇ
ಖೋಡಿನಂದದಿ ನಡೆದು ಕೇಡಿಗೊಳಗಾಗಿರಲು,
ಖೋಡಿಗಳೆದವ ನಮ್ಮ ನುಡಿಯನೆಂದಾತನನು
ನೋಡಿಯೂ ನೋಡದಾ ತೆರ ಸುಮ್ಮಗಿರುವರೆ ?


ಹಲವು ಸಲ ದಾಂಟಿಹೆಯೊ, ಹೊಳೆಯಾಳ ತಿಳಿದಿಹೆಯೊ,
ಸುಲಭದಲಿ ಹಲವು ಜನರನು ಪಾರು ಮಾಡಿಹೆಯೊ!
ತಲುಪಿಸೈ ತಡಿಗೆನ್ನ ಚೆಲುವ ಅಂಬಿಗರಣ್ಣ,
ಬಲುಮೆಯಿಂದಲಿ ನನ್ನ ಬಳಗದೊಳು ಕೂಡಿಸೈ!
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...