ಶ್ರೀಕೃಷ್ಣನ ಕೊಳಲಿಗೆ

ಏನು ಮುನ್ನಿನ ಜನ್ಮದಲಿ ಪುಣ್ಯಗೈದಿರುವೆ
ಇಂಚರದ ಕೊಳಲೆ ನೀನು ?
ಗಾನಲೋಲನ ಕೈಯ ಸೇರಿ ಕುಣಿದಾಡಿಸಿದೆ
ಕಮಲೋದ್ಧವಾಂಡವನ್ನು!
ಆರೋಹಣ ಸ್ವರದಿ ಸುಪ್ತಿಯಲ್ಲಿಹ ಜಗವ
ಜಾಗೃತಿಯನೊಂದಿಸಿದೆಯೊ !
ಅವರೋಹಣ ಸ್ವರದಿ ಎಚ್ಚತ್ತ ಜಗದ ಬಗೆ-
ಯನ್ನು ನಿನ್ನೆಡೆಗೆಳೆದೆಯೊ!
ನಂದನಂದನನ ನನ್ನಿಯ ಹಾಡನೊಡಗೊಂಡ
ಚೆಂದವಹ ನಿನ್ನ ದನಿಯು-
ಕಂದರನು ಒಳುದಾರಿಯಲ್ಲಿ ನಡೆಯಿಸುವ ಹೆ-
ತ್ತಮ್ಮನಿನಿದಾದ ನುಡಿಯು!
ಗೋಪಾಲಬಾಲಕರು ತಾಪಕೊಳಗಾಗದೊಲು
ಶ್ರೀಕೃಷ್ಣನೇನು ಗೈದ?
ನೀ ಪೇಳು, ನಿನ್ನ ಮಧುರವದಿಂದಲವನಾವ
ಮೋಹಮಂತ್ರವನೂದಿದ?
ನಲ್ಲೆಯರ ಮುಂದೆ ಗೋವಿಂದನಾಜ್ಞೆಯಲಿ ನೀ-
ನಾವ ಪದ ಪಳ್ದೆ ? ಎಂತು ?
ಗೊಲ್ಲಹೆಂಗಳೆಯರಿಗೆ ಸಂಸಾರದನುಭವವು
ಬೆಲ್ಲದಂತಾದುದೆಂತು ?
ಸತ್ಯಕ್ಕೆ ಸಹಕಾರಿ ಮಿಥ್ಯಕ್ಕೆ ಕಡುವೈರಿ
ಸಜ್ಜನರ ದುಃಖಹಾರಿ-
ಮತ್ತೆ ನಿನ್ನಾ ಗಾನವಾಗಿದ್ದಿತೈ ಕುಜನ-
ವಂಶಕ್ಕೆ ಹಿರಿಯ ಮಾರಿ!
ಸಂತಸದ ಸಿರಿಮನೆಯು ಸಂತೃಪ್ತಿಯರಮನೆಯು
ಜ್ಞಾನಪೀಯೂಷಝರಿಯು,
ಶಾಂತಿಯಾಗರವು ನಿಶ್ಚಿಂತೆಯಾ ತವರೂರು
ನಿನ್ನ ಮಂಜುಲಲಹರಿಯು!
ನಿನ್ನ ಸ್ವರ ಕೇಳದಿರೆ ಚೆನ್ನ ಕಿಟ್ಟನ ಮರೆತು
ಬನ್ನಗೊಂಡಿಹುದು ಬುವಿಯು;
ಧನ್ಯ ವೇಣುವೆ, ನಮಗೆ ಕೇಳದಿಹುದೇಕೀಗ.
ನಿನ್ನ ಮಾಧುರ ಮುರಲಿಯು?
ದ್ವಾಪರದಿ ನುಡಿಸಿದಾ ಗೋಪಾಲ ನಿನ್ನನ್ನ-
ದೇಕೀಗ ನುಡಿಸದಿಹನು?
ತಾಪ ಕೂಪದೊಳುರುಳಿರುವ ಜಗದ ಜನರನ್ನು
ತಣಿಸದೇತಕೆ ತಡೆದನು?

ಇದೇ ಭಾವಸಮಾಧಿಯೊಳಿರುವಂದು, ಒಳಗಿವಿಯಲೊಂದು

ಕೊಳಲುಲಿಯ ಇನಿದನಿ ಮಿಡಿದು ಎದೆಯನರಳಿಸಿತು:

ನುಡಿಸದೇಕಿಹ? ದೇವ ಜಗದಾದಿಯಿಂದೆ ಎಡೆ-
ಬಿಡದೆ ನುಡಿಸುತಲಿರುವನು;

ನುಡಿಸುವನು ಜಗವು ಮುಗಿವಾ ವರೆಗೆ ಮುಂದೆಯೂ
ಎಂದಿನಂದದಲಾತನು.

ಭೋಗಮಲದಲಿ ಮುಚ್ಚಿ ಹೋಗಿರುವ ನಿನ್ನ ಕಿವಿ-
ಗಳಿಗೆ ಕೇಳಿಸದಿರುವುದೋ!
ತ್ಯಾಗದಿಂದಾ ಮಲವ ನೀಗಿದರೆ ನಿನಗೆ ನಿಜ-
ವಾಗಿಯಾ ದನಿ ಕೇಳ್ವುದೋ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಇಂದಿನ ವಿವಾಹ ವಿಚ್ಚೇದನ
Next post ಸಮಾಧಿ

ಸಣ್ಣ ಕತೆ

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

cheap jordans|wholesale air max|wholesale jordans|wholesale jewelry|wholesale jerseys