Home / ಕವನ / ಕವಿತೆ / ಶ್ರೀಕೃಷ್ಣನ ಕೊಳಲಿಗೆ

ಶ್ರೀಕೃಷ್ಣನ ಕೊಳಲಿಗೆ

ಏನು ಮುನ್ನಿನ ಜನ್ಮದಲಿ ಪುಣ್ಯಗೈದಿರುವೆ
ಇಂಚರದ ಕೊಳಲೆ ನೀನು ?
ಗಾನಲೋಲನ ಕೈಯ ಸೇರಿ ಕುಣಿದಾಡಿಸಿದೆ
ಕಮಲೋದ್ಧವಾಂಡವನ್ನು!
ಆರೋಹಣ ಸ್ವರದಿ ಸುಪ್ತಿಯಲ್ಲಿಹ ಜಗವ
ಜಾಗೃತಿಯನೊಂದಿಸಿದೆಯೊ !
ಅವರೋಹಣ ಸ್ವರದಿ ಎಚ್ಚತ್ತ ಜಗದ ಬಗೆ-
ಯನ್ನು ನಿನ್ನೆಡೆಗೆಳೆದೆಯೊ!
ನಂದನಂದನನ ನನ್ನಿಯ ಹಾಡನೊಡಗೊಂಡ
ಚೆಂದವಹ ನಿನ್ನ ದನಿಯು-
ಕಂದರನು ಒಳುದಾರಿಯಲ್ಲಿ ನಡೆಯಿಸುವ ಹೆ-
ತ್ತಮ್ಮನಿನಿದಾದ ನುಡಿಯು!
ಗೋಪಾಲಬಾಲಕರು ತಾಪಕೊಳಗಾಗದೊಲು
ಶ್ರೀಕೃಷ್ಣನೇನು ಗೈದ?
ನೀ ಪೇಳು, ನಿನ್ನ ಮಧುರವದಿಂದಲವನಾವ
ಮೋಹಮಂತ್ರವನೂದಿದ?
ನಲ್ಲೆಯರ ಮುಂದೆ ಗೋವಿಂದನಾಜ್ಞೆಯಲಿ ನೀ-
ನಾವ ಪದ ಪಳ್ದೆ ? ಎಂತು ?
ಗೊಲ್ಲಹೆಂಗಳೆಯರಿಗೆ ಸಂಸಾರದನುಭವವು
ಬೆಲ್ಲದಂತಾದುದೆಂತು ?
ಸತ್ಯಕ್ಕೆ ಸಹಕಾರಿ ಮಿಥ್ಯಕ್ಕೆ ಕಡುವೈರಿ
ಸಜ್ಜನರ ದುಃಖಹಾರಿ-
ಮತ್ತೆ ನಿನ್ನಾ ಗಾನವಾಗಿದ್ದಿತೈ ಕುಜನ-
ವಂಶಕ್ಕೆ ಹಿರಿಯ ಮಾರಿ!
ಸಂತಸದ ಸಿರಿಮನೆಯು ಸಂತೃಪ್ತಿಯರಮನೆಯು
ಜ್ಞಾನಪೀಯೂಷಝರಿಯು,
ಶಾಂತಿಯಾಗರವು ನಿಶ್ಚಿಂತೆಯಾ ತವರೂರು
ನಿನ್ನ ಮಂಜುಲಲಹರಿಯು!
ನಿನ್ನ ಸ್ವರ ಕೇಳದಿರೆ ಚೆನ್ನ ಕಿಟ್ಟನ ಮರೆತು
ಬನ್ನಗೊಂಡಿಹುದು ಬುವಿಯು;
ಧನ್ಯ ವೇಣುವೆ, ನಮಗೆ ಕೇಳದಿಹುದೇಕೀಗ.
ನಿನ್ನ ಮಾಧುರ ಮುರಲಿಯು?
ದ್ವಾಪರದಿ ನುಡಿಸಿದಾ ಗೋಪಾಲ ನಿನ್ನನ್ನ-
ದೇಕೀಗ ನುಡಿಸದಿಹನು?
ತಾಪ ಕೂಪದೊಳುರುಳಿರುವ ಜಗದ ಜನರನ್ನು
ತಣಿಸದೇತಕೆ ತಡೆದನು?

ಇದೇ ಭಾವಸಮಾಧಿಯೊಳಿರುವಂದು, ಒಳಗಿವಿಯಲೊಂದು

ಕೊಳಲುಲಿಯ ಇನಿದನಿ ಮಿಡಿದು ಎದೆಯನರಳಿಸಿತು:

ನುಡಿಸದೇಕಿಹ? ದೇವ ಜಗದಾದಿಯಿಂದೆ ಎಡೆ-
ಬಿಡದೆ ನುಡಿಸುತಲಿರುವನು;

ನುಡಿಸುವನು ಜಗವು ಮುಗಿವಾ ವರೆಗೆ ಮುಂದೆಯೂ
ಎಂದಿನಂದದಲಾತನು.

ಭೋಗಮಲದಲಿ ಮುಚ್ಚಿ ಹೋಗಿರುವ ನಿನ್ನ ಕಿವಿ-
ಗಳಿಗೆ ಕೇಳಿಸದಿರುವುದೋ!
ತ್ಯಾಗದಿಂದಾ ಮಲವ ನೀಗಿದರೆ ನಿನಗೆ ನಿಜ-
ವಾಗಿಯಾ ದನಿ ಕೇಳ್ವುದೋ!
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...