ಬಾಳಿದು ಕಾಳೆಗದ ಕಣ!


ಕೂಗುತಲಿದೆ ಕಹಳೆಯು-
ನವಯುಗ ವೈತಾಳಿಯು!
‘ಬಾಳಿದು ಕಾಳೆಗದ ಕಣ!’
ಹೇಳುತಿರುವುದಿಂತಾ ಸ್ವನ !
ಕೂಗುತಲಿದೆ ಕಹಳೆಯು….
ನಮಯುಗವೈತಾಳಿಯು!


‘ಬೇಡ ಕದನ’ ಎಂದೊರೆವಾ
ಕೇಡುಗಾರನೆಲ್ಲಿರುವ….?
ಹೇಡಿ ಏನ ಬಲ್ಲನವ?
ನಾಡಿಗೆ ಕಾಳೆಗವೆ ಜೀವ!
ಕೂಗುತಲಿದೆ ಕಹಳೆಯು….
ನವಯುಗವೈತಾಳಿಯು!


ಗೆಳೆಯರಂತೆ ನಟಿಸುತೆ ಹಗೆ-
ಬಳಗ ನಮ್ಮ ಬೀಡಿನೊಳಗೆ
ತಿಂದು ತೇಗಿ ಬಾಳುತಿದೆ…
ಕೊಂದೆಲ್ಲರನಾಳುತಿದೆ!
ಕೂಗುತಲಿದೆ ಕಹಳೆಯು
ನವಯುಗವೈತಾಳಿಯು!


‘ಈ ಸ್ಮಶಾನ ಶಾಂತಿಯು
ಶಾಂತಿಯೆ ಇದು? ಭ್ರಾಂತಿಯು!
ನಿಮ್ಮೆಲ್ಲರ ಮಾನವತನ
ಬೇಯುತಲಿದೆ ನೋಡಿರದನ’….
ಕೂಗುತಲಿದೆ ಕಹಳೆಯು,
ನವಯುಗವೈತಾಳಿಯು!


‘ಬದುಕಿದುದಕೆ ಕುರುಹಾವುದು ?
ಕದನವೆ ಸರಿ ಬೇರಾವುದು ?
ಬೇಡ ಕದನವೆಂಬ ರೀತಿ-
ಹೇಡಿಯದಿದು ಹೆಣದ ನೀತಿ!’
ಕೂಗುತಲಿದೆ ಕಹಳೆಯು,
ನವಯುಗವೈತಾಳಿಯು!


‘ಅಕ್ಕ-ತಾಯಿ-ತಂಗಿದರು
ಅಕ್ಕರೆಯಾ ಅಂಗನೆಯರು-
ನಿಮ್ಮ ಬಲುಹು ಬೀರತನ
ನೋಡಿ ನಲಿವವಂಬರು ದಿನ.’
ಕೂಗುತಲಿದೆ ಕಹಳೆಯು,
ನವಯುಗವೈತಾಳಿಯು!


‘ಬಿಡಿರಿ ಬಿಡಿರಿ ಹಳೆಯಾಯುಧ
ಕೊಡಲಿ ಕತ್ತಿ ಬಿಲ್ಲು ಗದಾ-
ಹೊಸತು ಕಾಲ, ಹೊಸ ಕಾಳೆಗ,
ಹೊಸಕೈದುನ ಹುಡುಕಿರೀಗ,
ಕೂಗುತಲಿದ ಕಹಳೆಯು,
ನವಯುಗವೈತಾಳಿಯು!


‘ಬಲಿದಿರುವುವೆ ಜಾಲಗಳು?
ಬಳಸಿರುವುವೆ ಬೇಲಿಗಳು?
ಹರಿದೊಗೆಯಿರಿ ಕೊಳೆತ ಜಾಲ
ಮುರಿದೇಳಿರಿ ಹುಳಿತ ಬೇಲಿ!’
ಕೂಗುತಲಿದೆ ಕಹಳೆಯು,
ನವಯುಗವೈತಾಳಿಯು!


‘ಕೇಳಿ ಕೇಳಿ ಕಹಳೆಯ,
ಕೆಲದೊಳೆ ಇದೆ ಪಾಳೆಯ!
ಕಾಳೆಗಕೆದ್ದವ ಬಾಳುವ,
ಏಳದಿದ್ದರವ ಬೀಳುವ!
ಕೂಗುತಲಿದೆ ಕಹಳೆಯು
ನವಯುಗವೈತಾಳಿಯು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅನ್ನ ಬ್ರಹ್ಮ ಅನ್ನ ಬ್ರಹ್ಮ
Next post ಸಾವಿತ್ರಿ

ಸಣ್ಣ ಕತೆ

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…