Home / ಕವನ / ಕವಿತೆ / ಬಾಳಿದು ಕಾಳೆಗದ ಕಣ!

ಬಾಳಿದು ಕಾಳೆಗದ ಕಣ!


ಕೂಗುತಲಿದೆ ಕಹಳೆಯು-
ನವಯುಗ ವೈತಾಳಿಯು!
‘ಬಾಳಿದು ಕಾಳೆಗದ ಕಣ!’
ಹೇಳುತಿರುವುದಿಂತಾ ಸ್ವನ !
ಕೂಗುತಲಿದೆ ಕಹಳೆಯು….
ನಮಯುಗವೈತಾಳಿಯು!


‘ಬೇಡ ಕದನ’ ಎಂದೊರೆವಾ
ಕೇಡುಗಾರನೆಲ್ಲಿರುವ….?
ಹೇಡಿ ಏನ ಬಲ್ಲನವ?
ನಾಡಿಗೆ ಕಾಳೆಗವೆ ಜೀವ!
ಕೂಗುತಲಿದೆ ಕಹಳೆಯು….
ನವಯುಗವೈತಾಳಿಯು!


ಗೆಳೆಯರಂತೆ ನಟಿಸುತೆ ಹಗೆ-
ಬಳಗ ನಮ್ಮ ಬೀಡಿನೊಳಗೆ
ತಿಂದು ತೇಗಿ ಬಾಳುತಿದೆ…
ಕೊಂದೆಲ್ಲರನಾಳುತಿದೆ!
ಕೂಗುತಲಿದೆ ಕಹಳೆಯು
ನವಯುಗವೈತಾಳಿಯು!


‘ಈ ಸ್ಮಶಾನ ಶಾಂತಿಯು
ಶಾಂತಿಯೆ ಇದು? ಭ್ರಾಂತಿಯು!
ನಿಮ್ಮೆಲ್ಲರ ಮಾನವತನ
ಬೇಯುತಲಿದೆ ನೋಡಿರದನ’….
ಕೂಗುತಲಿದೆ ಕಹಳೆಯು,
ನವಯುಗವೈತಾಳಿಯು!


‘ಬದುಕಿದುದಕೆ ಕುರುಹಾವುದು ?
ಕದನವೆ ಸರಿ ಬೇರಾವುದು ?
ಬೇಡ ಕದನವೆಂಬ ರೀತಿ-
ಹೇಡಿಯದಿದು ಹೆಣದ ನೀತಿ!’
ಕೂಗುತಲಿದೆ ಕಹಳೆಯು,
ನವಯುಗವೈತಾಳಿಯು!


‘ಅಕ್ಕ-ತಾಯಿ-ತಂಗಿದರು
ಅಕ್ಕರೆಯಾ ಅಂಗನೆಯರು-
ನಿಮ್ಮ ಬಲುಹು ಬೀರತನ
ನೋಡಿ ನಲಿವವಂಬರು ದಿನ.’
ಕೂಗುತಲಿದೆ ಕಹಳೆಯು,
ನವಯುಗವೈತಾಳಿಯು!


‘ಬಿಡಿರಿ ಬಿಡಿರಿ ಹಳೆಯಾಯುಧ
ಕೊಡಲಿ ಕತ್ತಿ ಬಿಲ್ಲು ಗದಾ-
ಹೊಸತು ಕಾಲ, ಹೊಸ ಕಾಳೆಗ,
ಹೊಸಕೈದುನ ಹುಡುಕಿರೀಗ,
ಕೂಗುತಲಿದ ಕಹಳೆಯು,
ನವಯುಗವೈತಾಳಿಯು!


‘ಬಲಿದಿರುವುವೆ ಜಾಲಗಳು?
ಬಳಸಿರುವುವೆ ಬೇಲಿಗಳು?
ಹರಿದೊಗೆಯಿರಿ ಕೊಳೆತ ಜಾಲ
ಮುರಿದೇಳಿರಿ ಹುಳಿತ ಬೇಲಿ!’
ಕೂಗುತಲಿದೆ ಕಹಳೆಯು,
ನವಯುಗವೈತಾಳಿಯು!


‘ಕೇಳಿ ಕೇಳಿ ಕಹಳೆಯ,
ಕೆಲದೊಳೆ ಇದೆ ಪಾಳೆಯ!
ಕಾಳೆಗಕೆದ್ದವ ಬಾಳುವ,
ಏಳದಿದ್ದರವ ಬೀಳುವ!
ಕೂಗುತಲಿದೆ ಕಹಳೆಯು
ನವಯುಗವೈತಾಳಿಯು!
*****

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...