Home / ಕವನ / ಕವಿತೆ / ಬಾಳಿದು ಕಾಳೆಗದ ಕಣ!

ಬಾಳಿದು ಕಾಳೆಗದ ಕಣ!


ಕೂಗುತಲಿದೆ ಕಹಳೆಯು-
ನವಯುಗ ವೈತಾಳಿಯು!
‘ಬಾಳಿದು ಕಾಳೆಗದ ಕಣ!’
ಹೇಳುತಿರುವುದಿಂತಾ ಸ್ವನ !
ಕೂಗುತಲಿದೆ ಕಹಳೆಯು….
ನಮಯುಗವೈತಾಳಿಯು!


‘ಬೇಡ ಕದನ’ ಎಂದೊರೆವಾ
ಕೇಡುಗಾರನೆಲ್ಲಿರುವ….?
ಹೇಡಿ ಏನ ಬಲ್ಲನವ?
ನಾಡಿಗೆ ಕಾಳೆಗವೆ ಜೀವ!
ಕೂಗುತಲಿದೆ ಕಹಳೆಯು….
ನವಯುಗವೈತಾಳಿಯು!


ಗೆಳೆಯರಂತೆ ನಟಿಸುತೆ ಹಗೆ-
ಬಳಗ ನಮ್ಮ ಬೀಡಿನೊಳಗೆ
ತಿಂದು ತೇಗಿ ಬಾಳುತಿದೆ…
ಕೊಂದೆಲ್ಲರನಾಳುತಿದೆ!
ಕೂಗುತಲಿದೆ ಕಹಳೆಯು
ನವಯುಗವೈತಾಳಿಯು!


‘ಈ ಸ್ಮಶಾನ ಶಾಂತಿಯು
ಶಾಂತಿಯೆ ಇದು? ಭ್ರಾಂತಿಯು!
ನಿಮ್ಮೆಲ್ಲರ ಮಾನವತನ
ಬೇಯುತಲಿದೆ ನೋಡಿರದನ’….
ಕೂಗುತಲಿದೆ ಕಹಳೆಯು,
ನವಯುಗವೈತಾಳಿಯು!


‘ಬದುಕಿದುದಕೆ ಕುರುಹಾವುದು ?
ಕದನವೆ ಸರಿ ಬೇರಾವುದು ?
ಬೇಡ ಕದನವೆಂಬ ರೀತಿ-
ಹೇಡಿಯದಿದು ಹೆಣದ ನೀತಿ!’
ಕೂಗುತಲಿದೆ ಕಹಳೆಯು,
ನವಯುಗವೈತಾಳಿಯು!


‘ಅಕ್ಕ-ತಾಯಿ-ತಂಗಿದರು
ಅಕ್ಕರೆಯಾ ಅಂಗನೆಯರು-
ನಿಮ್ಮ ಬಲುಹು ಬೀರತನ
ನೋಡಿ ನಲಿವವಂಬರು ದಿನ.’
ಕೂಗುತಲಿದೆ ಕಹಳೆಯು,
ನವಯುಗವೈತಾಳಿಯು!


‘ಬಿಡಿರಿ ಬಿಡಿರಿ ಹಳೆಯಾಯುಧ
ಕೊಡಲಿ ಕತ್ತಿ ಬಿಲ್ಲು ಗದಾ-
ಹೊಸತು ಕಾಲ, ಹೊಸ ಕಾಳೆಗ,
ಹೊಸಕೈದುನ ಹುಡುಕಿರೀಗ,
ಕೂಗುತಲಿದ ಕಹಳೆಯು,
ನವಯುಗವೈತಾಳಿಯು!


‘ಬಲಿದಿರುವುವೆ ಜಾಲಗಳು?
ಬಳಸಿರುವುವೆ ಬೇಲಿಗಳು?
ಹರಿದೊಗೆಯಿರಿ ಕೊಳೆತ ಜಾಲ
ಮುರಿದೇಳಿರಿ ಹುಳಿತ ಬೇಲಿ!’
ಕೂಗುತಲಿದೆ ಕಹಳೆಯು,
ನವಯುಗವೈತಾಳಿಯು!


‘ಕೇಳಿ ಕೇಳಿ ಕಹಳೆಯ,
ಕೆಲದೊಳೆ ಇದೆ ಪಾಳೆಯ!
ಕಾಳೆಗಕೆದ್ದವ ಬಾಳುವ,
ಏಳದಿದ್ದರವ ಬೀಳುವ!
ಕೂಗುತಲಿದೆ ಕಹಳೆಯು
ನವಯುಗವೈತಾಳಿಯು!
*****

Tagged:

Leave a Reply

Your email address will not be published. Required fields are marked *

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...