Home / ಕವನ / ಕವಿತೆ / ಬೆಳಕನೆರಚು!

ಬೆಳಕನೆರಚು!

ಬೆಳಕನೆರಚು, ಚಳಕನೆರಳು,
ಯುಗ-ಯುಗಾಂತ ತೊಳಗಲಿ!
ಇಳೆಯ ಕವಿದ ಕಳ್ತಲೆಯನು
ಕಳೆದೊಗೆ ದೀಪಾವಳಿ!


ಬರಿಯ ಒಂದೆ ಇರುಳು ಬಂದೆ
ಮುಗಿಯಿತೇನು ಕಾರ್‍ಯ?
ವರುಷದಿ ನೂರಾರು ತಮಸಿ-
ನಿರುಳಿವೆ ಅನಿವಾರ್ಯ!
ಅಂದಂದಿನ ಕತ್ತಲಿಂದೆ
ಮಂದಿಯ ಮನವಿಡಿದು ಮುಂದೆ
ಕರೆದೊಯ್ಯುವರಾರ್ ಅನಂದೆ-
ಮರೆದು ಸರಿಯೆ ನೀನು ?
ಮಿರುಗಿ ಮಾಯವಾಗುತಿರುವ
ಮಿಂಚಿಗೆ ಬೆಲೆಯೇನು?


ನಿನಗಾಗಿಯೆ ಹೊಲ-ನೆಲಗಳು
ಬೆಳೆಯೊಳೇರಿ ನಿಂತಿವೆ;
ನಿನಗಾಗಿಯೆ ಹೊಳೆ-ಕೊಳಗಳು
ತಿಳಿಯ ನೀರನಾಂತಿವೆ.
ಬಿಳಿಯ ಹೊನ್ನ ಸೇವಂತಿಗೆ
ಹೊಳೆದು ನಿನ್ನ ಮೈಕಾಂತಿಗೆ
ಸವಿಗಾರರ ಬಗೆಯ ಸೆಳೆವ
ತವಕದಿ ಬಾಯ್‌ದೆರೆದಿವೆ-
ಬುವಿಯ ಜೀವಕುಲವೆ ದೇವ-
ದಿನವ ನಿನ್ನ ಕರೆದಿವೆ!


ಬರುವುದು ದೀವಳಿಗೆಯೆಂದು
ತಿರೆಯೇ ಕುಣಿ-ಕುಣಿಯಿತು!
ತರುವುದು ಹಿರಿಬೆಳಕನೆಂದು
ಜನವು ದಿನವು ನೆನೆಯಿತು!
ಸಂತೆಗೆ ಹಸರಿಗನು ಬಂದು
ಸಂತೆ ಹರಡಿ ದಿನವದೊಂದು
ಕಂತೆ ಹೇರಿ ಮತ್ತೆ ದಾರಿ
ಹಿಡಿದೆಲ್ಲಿಗೊ ನಡೆವನು;
ಅಂತೆ ನಿನ್ನ ಆಗಮವಿರೆ
ಹಿರಿಮೆ ನಿನ್ನದೇನು?


ಕುರುಡಗೆರಡು ನಿಮಿಷ ಕಣ್ಣ
ನೋಟಗಳನೆ ನೀಡಿ,
ಧರೆಯ ಚನ್ನ ಸೊಬಗಿನನ್ನ-
ವೂಡುವಂತೆ ಮಾಡಿ,
ಮರಳಿ ಕಣ್ಣ ಕಳೆದೊಡವಗೆ
ಇರುವುದೇನು ಬರಿ ತಗುಬಗೆ!
ವರುಷಕೊಂದು ಬಾರಿ ಬಂದು
ಬೆಳಕಕರೆವೆ ನೀನು….
ಉಳಿದ ಇರುಳ ತಮಸಿನುರುಳ
ಕಳೆಯೆ ದಾರಿಯೇನು?
* * *
ಬೆಳಕನೆರಚು, ಬೆಳಕನೆರಚು,
ಯುಗ-ಯುಗವನು ಬೆಳಗಿಸು,
ಇಳೆಯ ಕವಿವ ಕಳ್ತಲೆಗಳ
ಕಳೆದೇಗಲು ತೊಳಗಿಸು !
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಂ ಎನ್ ಎಸ್ ರಾವ್