ಬೆಳಕನೆರಚು!

ಬೆಳಕನೆರಚು, ಚಳಕನೆರಳು,
ಯುಗ-ಯುಗಾಂತ ತೊಳಗಲಿ!
ಇಳೆಯ ಕವಿದ ಕಳ್ತಲೆಯನು
ಕಳೆದೊಗೆ ದೀಪಾವಳಿ!


ಬರಿಯ ಒಂದೆ ಇರುಳು ಬಂದೆ
ಮುಗಿಯಿತೇನು ಕಾರ್‍ಯ?
ವರುಷದಿ ನೂರಾರು ತಮಸಿ-
ನಿರುಳಿವೆ ಅನಿವಾರ್ಯ!
ಅಂದಂದಿನ ಕತ್ತಲಿಂದೆ
ಮಂದಿಯ ಮನವಿಡಿದು ಮುಂದೆ
ಕರೆದೊಯ್ಯುವರಾರ್ ಅನಂದೆ-
ಮರೆದು ಸರಿಯೆ ನೀನು ?
ಮಿರುಗಿ ಮಾಯವಾಗುತಿರುವ
ಮಿಂಚಿಗೆ ಬೆಲೆಯೇನು?


ನಿನಗಾಗಿಯೆ ಹೊಲ-ನೆಲಗಳು
ಬೆಳೆಯೊಳೇರಿ ನಿಂತಿವೆ;
ನಿನಗಾಗಿಯೆ ಹೊಳೆ-ಕೊಳಗಳು
ತಿಳಿಯ ನೀರನಾಂತಿವೆ.
ಬಿಳಿಯ ಹೊನ್ನ ಸೇವಂತಿಗೆ
ಹೊಳೆದು ನಿನ್ನ ಮೈಕಾಂತಿಗೆ
ಸವಿಗಾರರ ಬಗೆಯ ಸೆಳೆವ
ತವಕದಿ ಬಾಯ್‌ದೆರೆದಿವೆ-
ಬುವಿಯ ಜೀವಕುಲವೆ ದೇವ-
ದಿನವ ನಿನ್ನ ಕರೆದಿವೆ!


ಬರುವುದು ದೀವಳಿಗೆಯೆಂದು
ತಿರೆಯೇ ಕುಣಿ-ಕುಣಿಯಿತು!
ತರುವುದು ಹಿರಿಬೆಳಕನೆಂದು
ಜನವು ದಿನವು ನೆನೆಯಿತು!
ಸಂತೆಗೆ ಹಸರಿಗನು ಬಂದು
ಸಂತೆ ಹರಡಿ ದಿನವದೊಂದು
ಕಂತೆ ಹೇರಿ ಮತ್ತೆ ದಾರಿ
ಹಿಡಿದೆಲ್ಲಿಗೊ ನಡೆವನು;
ಅಂತೆ ನಿನ್ನ ಆಗಮವಿರೆ
ಹಿರಿಮೆ ನಿನ್ನದೇನು?


ಕುರುಡಗೆರಡು ನಿಮಿಷ ಕಣ್ಣ
ನೋಟಗಳನೆ ನೀಡಿ,
ಧರೆಯ ಚನ್ನ ಸೊಬಗಿನನ್ನ-
ವೂಡುವಂತೆ ಮಾಡಿ,
ಮರಳಿ ಕಣ್ಣ ಕಳೆದೊಡವಗೆ
ಇರುವುದೇನು ಬರಿ ತಗುಬಗೆ!
ವರುಷಕೊಂದು ಬಾರಿ ಬಂದು
ಬೆಳಕಕರೆವೆ ನೀನು….
ಉಳಿದ ಇರುಳ ತಮಸಿನುರುಳ
ಕಳೆಯೆ ದಾರಿಯೇನು?
* * *
ಬೆಳಕನೆರಚು, ಬೆಳಕನೆರಚು,
ಯುಗ-ಯುಗವನು ಬೆಳಗಿಸು,
ಇಳೆಯ ಕವಿವ ಕಳ್ತಲೆಗಳ
ಕಳೆದೇಗಲು ತೊಳಗಿಸು !
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬಾ ಎನ್ನೆದೆಯ ಗುಡಿಯಲಿ ಬೆಳಗು
Next post ಆರೋಹ

ಸಣ್ಣ ಕತೆ

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

cheap jordans|wholesale air max|wholesale jordans|wholesale jewelry|wholesale jerseys