ನಮಗೆಯು ಹೆಸರೊಂದನು ತರಲಿ!

ಹಾಳು ಪಟ್ಟಣದ ಬಂಡೆಯ ಬಳಗದ
ಕೊರಗಿನ ಮೌನದ ಕೂಗನು ಕೇಳಿ!


“ಹೇಳಲಿಕಾಗದ ಕಾಲದಿಂದಲೂ
ತಾಳಿ ಗಾಳಿ-ಮಳೆ ಚಳಿ-ಬಿರುಬಿಸಿಲು
ಸೊಗಸೇನನೊ ಬದುಕಿಗೆ ಬಯಸಿದೆವು,
ಹಗಲಿರುಳೂ ತಪದೊಳು ಬಳಲಿದೆವು….
ಆದರು ನಮಗಿಹ ಹೆಸರೇನು ?
ಬಂಡೆಯೆ ಅಲ್ಲವೆ ? ಬೇರೇನು ?”


“ನಿಂದೆಡೆಯೊಳೆ ಅಲುಗಾಡದೆ ನಿಂದು
ಒಂದೆ ಮನದಿ ಮಾಡಿದ ತಪವಿಂದು
ನಮಗೇತಕೆ ಕೊಡದಿರುವುದೊ ಫಲವ!
ಕೇಳುವೆವಾರಲಿ ನೆರವಿನ ಬಲವ ?
ನಮಗಿಹ ‘ಬಂಡೆ’ಯ ಹೆಸರನ್ನು
ತವಿಸುವರಾರೂ ಬರರೇನು?”


“ನಮ್ಮೊಡನೆಯೆ ನೆಲದೊಳು ಮೂಡಿದುವು,
ನಮ್ಮೊಂದಿಗೆ ತಪದೊಳು ಕೂಡಿದುವು,
ಎನಿತೆನಿತೋ ಘನತೆಯ ಪದವೊಂದಿ
ಜನದಲಿ ಹೊಸ ಹೊಸ ಹೆಸರನು ಹೊಂದಿ,
ಹೆಮ್ಮಯ ಕೀರ್‍ತಿಯ ಗಳಿಸಿದುವು
ನಮ್ಮಯ ಕುಲಬಂಧುಗಳೆ ಅವು!


“ಹಂಪೆಯಧೀಶನ ಶ್ರೀಶಿವಲಿಂಗ !
ವಿಜಯನಗರ ಕೋಟೆಯ ಅಂಗಾಂಗ !
ಅರಮನೆ ಸಿರಿಮನೆ ಗಜ-ತುರಗಾಲಯ !
ಅರಸಿಯರಂತಃಪುರ ಗುರುನಿಲಯ !
ಹೆಸರಿಂತೆನಿತನೊ ಪಡೆದಿಹವು-
ನಮ್ಮಯ ಕುಲಬಂಧುಗಳೆ ಅವು !


“ದೊರೆಗಳ ಶಾಸನವೊರೆಯುವುವೆನಿತೋ
ಗರತಿಯ ಬದುಕನು ಮೊರೆಯುವುವೆನಿತೋ !
ವೀರರ ಬಲುಹನು ಹಾಡುತಲೆನಿತೊ, ಉ-
ದಾರರ ಚಾಗವನಾಡುತಲೆನಿತೋ-
ಹೆಮ್ಮೆಯ ಹೆಸರನು ತಳೆದಿಹವು-
ನಮ್ಮಯ ಬಳಿಯಿದ್ದುವಲೆ ಅವು?


“ವಿಜಯ ವಿಟ್ಠಲನ ಚಿತ್ರದ ತೇರು!
ಗುಡಿ ಗೋಪುರ ಮಂಟಪಗಳ ಕುಸುರು !
ಎನಿತು ಕಲಾಕೃತಿ ಅನಿತಕು ಹೆಸರು,
ನಮಗೇನಿರುವುದು ಬರಿ ಬಿಸಿಯುಸಿರು !
ಕೆಲವೆ ಕಾಲ ಬಾಳಿದರು ಅವು-
ಹೆಮ್ಮೆಯ ಹೆಸರನು ಬೆಳಗಿದುವು!


“ಬಲ್ಲಿದರಾರೋ ಬಂದಿಲ್ಲಿಳಿಯುತ
ಇಲ್ಲಿಹ ನಮ್ಮವರನು ಎಚ್ಚರಿಸುತ
ಒಳ್ಳೆಯ ಒಳ್ಳೆಯ ರೂಪವ ಕೊಡಿಸಿ,
ಬಂಡೆಯೆಂಬ ಬರಿ ಹೆಸರನು ಬಿಡಿಸಿ,
ಮನ್ನಣೆಯೊಲವನು ಸಲ್ಲಿಸಿದರು-
ಧನ್ಯರಲ್ಲಿ ಅವರಡಗಿದರು ?


“ಬರುವರೆ.. ಬರಲಿರುವರೆ…. ಯಾರಾದರು
ಮರಳಿ ರಾಜ್ಯವನ್ನು ಕಟ್ಟುವರೆ ?
ಅರಮನೆ-ಗುಡಿಗಳಿಗಿರದಿರೆ ಹೋಗಲಿ
ಸೆರೆಮನೆಗಾದರು ನಮ್ಮನು ಬಳಸಲಿ !
ಬರಲಿರುವರು ಬೇಗನೆ ಬರಲಿ-
ನಮಗೂ ಹೆಸರೊಂದನು ತರಲಿ!
* * *
ಹಾಳುಪಟ್ಟಣದ ಬಂಡೆಯ ಬಳಗದ
ಗೋಳಿನ ಮೌನದ ಕೂಗನು ಕೇಳಿ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ತಾಯೇ ಈ ಜನ್ಮ ನೀನಿತ್ತ ಭಿಕ್ಷೆ
Next post ಪ್ರಾಣದೇವತೆಗಳ ಪರಮಸ್ವರ್ಗ

ಸಣ್ಣ ಕತೆ

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

cheap jordans|wholesale air max|wholesale jordans|wholesale jewelry|wholesale jerseys