Home / ಕವನ / ಕವಿತೆ / ಕರುಳಿನ ಕೊರಗು

ಕರುಳಿನ ಕೊರಗು


ಮನವು ನಿನಗಾಗಿಯೇ ಮೊರೆಯುತಿದೆಯೇ-ಚಿನ್ನ
ನೆನಹು ನಿಡುಸುಯಿಲುಗಳ ಕರೆಯುತಿದೆಯೆ?
ಕನಸು ನಿನ್ನದೆ ಚಿತ್ರ ಬರೆಯುತಿದೆಯೇ-ನಿನ್ನ
ಇನಿದುದನಿ ಕಿವಿಗಳನ್ನು ಕೊರೆಯುತ್ತಿದೆಯೆ!


ತೆಳುದುಟಿಯ ತಿಳಿಜೊಲ್ಲು, ಬಿಳಿಯ ಮೊಳೆವಲ್ಲು – ಆ
ಎಳಗಲ್ಲಗಳ ಚೆಲ್ಲು, ಮೆಲುನಗೆಯ ಸೊಲ್ಲು,
ಎಳಯುತ್ತಲಿಹವು ನನ್ನೊಳಗೆ ನಿನ್ನೊಡನೆಯೇ
ಎಳಗೂಸೆ, ನಿನ್ನೆದುರು ನನ್ನ ಬಲ ಹುಲ್ಲು!


ಕೆಳೆಯ ಬಳ್ಳಿಯ ಮೊಳೆಯು ನೀನೆಂದು ಇದ್ದೆ-ಕಂ-
ಮಲರು ತನಿವಣ್ಣುಗಳ ಬೆಳೆವೆನೆಂದಿದ್ದೆ.
ಅಳಿಯಾಸೆಯಲಿ ಕಾಲ ಸೆಳೆದೊಯ್ಯೆ ತನಗೆಂದು
ಅಳಿದು ಕೆಳೆಯಾಶೆ ನಾ ಕಳವಳದಿ ಬಿದ್ದೆ!


ಸಾಕಾಯಿತೇನೆ ಸವಿಸವಿಯ ಕೂಳು-ನಿನಗೆ
ಬೇಕಾಯಿತೇನೆ ಕಣ್ಣೀರ ಕಾಳು !
ಸಕ್ಕರೆಯ ತನಿವಾಲನೊಕ್ಕರಿಸಿ ಸವುಳುಪ್ಪ-
ನಿಕ್ಕಿರುವ ನೀರ ಬಯಸುವರೆ ಹೇಳು !


ಆಗಸದ ತೊಟ್ಟಿಲಲಿ ತೂಗಾಡಲೆಂದು-ನೀ
ಹೋಗಿರುವೆಯೆನುತ ಬಗೆ ಹೇಳುತಿಹುದು ;
ತೂಗುದೊಟ್ಟಿಲ ಹಗ್ಗವಾಗಬೇಕೆಂದು- ತಾ-
ನೇಗಲೂ ಕರುಳು ಹುರಿಗೊಳ್ಳುತಿಹುದು.


ಎಂದಿನಂದದ ನಗೆಯ ಚೆಂದಮೊಗದಿಂದ-ನೀ
ಬಂದು ಕುಳಿತಿರಲು ತೊಡೆಯಲ್ಲಿ ಕಂದ !
ಒಂದೆ ಸವಿಮುತ್ತಿಡುವೆನೆಂದಿರಲು ಎಚ್ಚತ್ತು
ಕಂದೆರೆಯಲರಿತೆ ಹಾಳ್‌ಗನಸಿನಂದ!


ಎನಿತೊ ಮುತ್ತಿಟ್ಟಿದ್ದೆ, ನಲಿವ ಪಟ್ಟಿದ್ದೆ-ಮೈ-
ಮನಗಳನು ತಣಿವಿನಲಿ ತೇಲಬಿಟ್ಟಿದ್ದೆ;
ಕನಸಿನೀ ಮುತ್ತಿನಾ ಗುಣವೇನೊ! ಎದ್ದಾಗ
ಮನಸು ಮೈ ಮುಳ್‌ಬಲೆಗೆ ಬಿದ್ದ ಹಾಗಿದ್ದೆ.


ಸಂತೆ ಬಯಲಾದಂತೆ ಹೃದಯ ಹಾಳು!- ಹೆರರ
ಸಂತಸದ ಸುಗ್ಗಿಯದು ನನಗೆ ಬೀಳು!
ತಂತಿ ಕಿಳ್ತಿಹ ವೀಣೆಯಂತೆ ಬಾಳು-ಇದರ
ಅಂತವೆಲ್ಲಿದೆ ಮಗುವ ಹೇಳು, ಹೇಳು!
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...