ನಿತ್ಯ ಪೂಜೆ

ಗುಡಿಯಲ್ಲಿ ನಡೆದಿರ್ದ್ದ ಪೂಜೆಯೇ ಸಿರಿಯಿಂದು
ಮರೆಯಾಗಿದೆ-ಎಲ್ಲ-ಮರೆಯಾಗಿದೆ!


ಅಳತೆಯಿರದನಿತು ದೀವಿಗೆಯೋಳಿ ತೊಳತೊಳಗಿ,
ಬೆಳಗಿಸಿದುವಂದು ದೇವಿಯ ವರದ ಮೂರುತಿಯ ;
ಕಳೆದುಕೊಂಡಿಂದು ತಿಳಿನೇಯವನು ದೀವಿಗೆಗ-
ಳಿಳಿದು ಕರ್ಗತ್ತಲೆಯು ಕವಿದು ಮುಸುಕಿದೆ ಗುಡಿಯ.
ದೇವಿಯಾ ವರದಮೂರುತಿ ಕಾಣದಿಹುದು;
ಭಾವುಕರ ಬಳಗವದು ಬೆದರಿ ಚೆದರಿಹುದು!


ಅರಳುಗಳ ಕರ್ಪುರಾರತಿಯ ಧೂಪದ ಕಂಪು
ಬೆರೆತು ಸುಳಿಗಾಳಿಯೋಳು ಹರಿದು, ದೂರದ ಜನರ
ಕರೆದೊಯ್ಯುತ್ತಿರಲಿಲ್ಲವೇ ಬಳಿಗೆ ? ಇಂದೇನು ?
ಸರಿದಿರುವ ಸೊಡರುಗಳ ಸೊವಡುಗಂಪದು ಹರಡಿ,
ಹೊರ- ಹೊರಟು ಮೂಗುಸೆಲೆ ಕೊರೆಯುತಿಹುದು,
ನೆರೆಯವರನೂ ದೂರ ಸರಿಸುತಿಹುದು !


ಅಂದಿನಾ ಪೂಜೆಯವಸರದ ಮಂತ್ರಗಳೇನು !
ಒಂದೆ ದನಿಯೊಳೆ ಮೊರೆವ ಭಾವಗೀತಗಳೇನು !
ದುಂದುಭಿಯ ಡೋಳು-ಜಾಗಟೆಗಳಬ್ಬರವೇನು !
ಇಂದದೊಂದೂ ಇಲ್ಲ, ಎಲ್ಲೆಲ್ಲಿಯೂ ಮೌನ !
ನುಡಿಯುತಿಹ ಹಲ್ಲಿಗಳ ಲೊಟಲೊಟೆಂಬುಲುಹು,
ಅಡಿಗಡಿಗೆ ಮೌನತೆಯ ಸೀಳಿ ಹೊರಡುವುವು!


ಹಾಲಕ್ಕಿಯೊಂದು ಹುಮ್ಮಸದಿ ಕಿಲಬಿಲಿಸುತಿದೆ ;
ಮೂಳನಾಯೊಂದು ಮನಬಂದಂತೆ ಬೊಗಳುತಿದೆ ;
ಕೇಳುತಿದೆ ಅತ್ತಿತ್ತ ನರಿಗಳೂಳಾಟ; ಬಿರುಗಾಳಿ ಬಿರು-
ಗಾಳಿ ಬಿರು-ಬಿರ್ರೆಂದು ಮೊರೆಮೊರೆದು ಬೀಸುತಿದೆ !
ಪೂಜೆಯವಸರದ ಮಂತ್ರ ಸ್ವನಗಳಿಲ್ಲ….
ಓಜೆಯಲಿ ಮೆರೆವ ವಾದ್ಯಧ್ವನಿಗಳಿಲ್ಲ!


ಓ! ಅರಿದಿದೇನಿದು?… ದೇವಿಯಿರುವ ದೆಸೆಯಿಂದಿತ್ತ,
ಬರುವ ಗಾಳಿಯೊಳು ಬೆರೆತಿರುವ ಬಿಸಿಯುಸಿರೇನು ?
ಬಿಸಿಯುಸಿರ ಬೆಂಬಳಿಸಿ ಬರುವ ದನಿ ಯಾರದಿದು ?
ಬರಿಯೆ ದನಿಯಲ್ಲ; ಹುರುಳಿನ ನುಡಿಯ ಕೂಡಿಹುದು!
ಗಾಳಿ ತರುತಿಹ ನುಡಿಯಿದೇನೆಂಬಿರೇನು?
ಕೇಳಿ-ಕೇಳಿರಿ, ನಸುವೆ ಕೊಟ್ಟು ಕಿವಿಗಳನು !


“ನಿತ್ಯ ಪೂಜೆಯು ಬೇಕು ! ನಿತ್ಯ ಪೂಜೆಯು ನನಗೆ !
ಕುತ್ತಗಳ ಕಳೆದುಕೊಳುವಾಶೆಯಲ್ಲವೆ ನಿಮಗೆ?
ನಿತ್ಯ ಪೂಜಿಸಲು ಬೇಸತ್ತರಾಗುವುದೇನು?
ನಿತ್ಯ ಪೂಜೆಯು ಬೇಕು; ನಿತ್ಯ ಪೂಜ್ಯಳು ನಾನು!
ಕತ್ತಲೆಗೆ ಹೆದರದಿರಿ ಕಾಲಿಡಿ ಮುಂದೆ,
ಒತ್ತರದಿ ಬನ್ನಿರೆಲ್ಲರು ಇಲ್ಲಿಗಿಂದೆ!
ಮರ-ಮರಳಿ ಸಲ್ಲಿಸಿರಿ ವೀರಪೂಜೆಯನೆನಗೆ,
ವರವಾವುದನು ಕೇಳಿ ಕೊಡುವೆ ನಾ ನಿಮಗೆ!”
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬರಿಯ ಮಣ್ಣ ಹಣತೆ ನಾನು
Next post ಸಾವಿತ್ರಿ

ಸಣ್ಣ ಕತೆ

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

cheap jordans|wholesale air max|wholesale jordans|wholesale jewelry|wholesale jerseys