Home / ಕವನ / ಕವಿತೆ / ಕಾಫಿಯ ಕೆರೆ

ಕಾಫಿಯ ಕೆರೆ

(ಕಾಳನ ಕೋರಿಕೆ)

ಕಾಳನು ಏಳೆಂಟು ವರುಷದ ಹುಡುಗ,
ಕಾಳಿಯ ಗುಡಿಗೊಂದು ದಿವಸ ಹೋದಾಗ-
ತೋಳೆತ್ತಿ ಕೈ ಮುಗಿದು ಕಣ್‌ಮುಚ್ಚಿ ನಿಂತು
ಕಾಳೀದೇವಿಗೆ ಬೇಡಿಕೊಂಡನು ಇಂತು ೧

ಅಮ್ಮಮ್ಮಾ ನಮ್ಮೂರು ಬಲು ದೊಡ್ಡದಮ್ಮಾ!
ನಮ್ಮೂರಲಿಹ ಜನ ಕಮ್ಮೀ ಇಲ್ಲಮ್ಮಾ!
ಎರಡು ಲಕ್ಷದ ಮೇಲೆ ಇನ್ನೆಷ್ಟೋ ಸಾವಿರ
ಇರುವರು-ಎಂದು ನಾನರಿತಿಹೆನಮ್ಮಾ! ೨

ದಿನ ದಿನ ಬೆಳಗು-ಸಂಜೆಯೊಳು ಅವರಿಗೆಲ್ಲಾ
ಕುಡಿಯಲು ಬಿಸಿ ಬಿಸಿ ಕಾಫೀ ಬೇಕಮ್ಮಾ!
ಅವರೆಲ್ಲಾ ಕುಡಿಯುವ ಕಾಫಿಯ ಲೆಕ್ಕವ
ವಿವರಿಸಿ ಹೇಳುವೆ, ಕೇಳು ನಮ್ಮಮ್ಮಾ! ೩

ಅಬ್ಬಬ್ಬಾ ! ತೀರ ಕಡಿಮೆಯಾಗಿ ಹಿಡಿದರೂ
ಒಬ್ಬೊಬ್ಬರಿಗೆ ಲೋಟಾ ಎರಡು ಬೇಡೇನೆ ?
ನಾಲ್ಕು ಲೋಟಕೆ ಕಿಟ್ಟಲಿ ತುಂಬುವುದು ಹದಿ-
ನಾಲ್ಕು ಕಿಟ್ಟಲಿಗೊಂದು ಕೊಡ ತುಂಬದೇನೆ ? ೪

ನೂರುಮಂದಿಗೆ ನಾಲ್ಕು ಕೊಡವಾಗುವುದು; ಹತ್ತು-
ನೂರುಮಂದಿಗೆ ನಲವತ್ತು ಆಗುವುದು ;
ಲಕ್ಷ ಮಂದಿಗೆ ನಾಲ್ಕು ಸಾವಿರ ಕೊಡ ಕಾಫೀ
ಲೆಕ್ಕವಾಯಿತೆ-ನಮಗೆಷ್ಟು ಬೇಕೆಂದು ? ೫

ನಮ್ಮೂರ ಜನಕೆಂಟು ಸಾವಿರಕ್ಕೂ ಹೆಚ್ಚು
ಕಮ್ಮನೆಯಾ ಕಾಫೀ ಕೊಡಗಳು ಬೇಕಮ್ಮಾ!
ಒಂದೊಂದೇ ದಿನಕಿಷ್ಟು ಕೊಡಗಳು ಬೇಕಿರೆ,
ಒಂದು ವರುಷಕೆಷ್ಟು ಲೆಕ್ಕ ನೋಡಮ್ಮಾ ! ೬

ಇಂದು ಈ ಲೆಕ್ಕವ ನಾ ಮಾಡಲರಿಯೆನೆ,
ಮುಂದಿನ ವರುಷಕೆ ಮಾಡಿ ಹೇಳುವೆನು !
ಇಂತಹ ಲೆಕ್ಕವ ಮಾಸ್ತರ್ರು ನಮಗಿನ್ನೂ
ಕಲಿಸಿಯೆ ಕೊಟ್ಟಿಲ್ಲ ನಾ ಮಾಡಲೇನು ? ೭

ಆದರು ನಾ ಸುಮಾರಾಗಿ ಹೇಳುವೆನು –
ನಮ್ಮೂರ ವರುಷದ ಕಾಫೀ ಲೆಕ್ಕವನು ;
ವರುಷದ ಕಾಫಿಯು ಸೇರಿ ಕೆಂಪಾಂಬುಧಿ,
ಕೆರೆಯಂಥಾ ಕೆರೆ ತುಂಬುವುದು ತಿಳಿ ನೀನು ! ೮

ಕೆರೆತುಂಬಾ ಕಾಫಿಯ ಕಾಸಬೇಕಾದರೆ,
ವರುಷವೆಲ್ಲವು ಎಷ್ಟು ಶ್ರಮ ನಮಗಮ್ಮಾ!
ಇರುವೆ ನೀ ಸುಮ್ಮನೆ ಕರುಣೆಯು ಬರದೇನೆ ?
ಹರಿಸು ನಮ್ಮಗಳ ಈ ಕೊರತೆಯನಮ್ಮಾ! ೯

ಇನ್ನೇನ ಬೇಡೆನು, ನಿನ್ನನು ಕಾಡೆನು,
ನನ್ನದಿದೊಂದೇ ಕೋರಿಕೆಯು ಕೇಳಮ್ಮಾ!
ಆಪತ್ತು ಬರದಂತೆ ನಮ್ಮೂರ ಜನಕೆಲ್ಲಾ
ಕಾಫಿಯ ಕೆರೆಯೊಂದ ಕೊಡು ನೀ ಕಾಳಮಾ ! ೧೦

ದೋಸೆಯ ಬೆಟ್ಟವೊಂದಿದ್ದರೂ ಬೇಕು,
ಇಲ್ಲದಿದ್ದರೆ ಕಾಫೀ ಕೆರೆಯೊಂದೇ ಸಾಕು!
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...