Home / ಕವನ / ಕವಿತೆ / ಕಾಫಿಯ ಕೆರೆ

ಕಾಫಿಯ ಕೆರೆ

(ಕಾಳನ ಕೋರಿಕೆ)

ಕಾಳನು ಏಳೆಂಟು ವರುಷದ ಹುಡುಗ,
ಕಾಳಿಯ ಗುಡಿಗೊಂದು ದಿವಸ ಹೋದಾಗ-
ತೋಳೆತ್ತಿ ಕೈ ಮುಗಿದು ಕಣ್‌ಮುಚ್ಚಿ ನಿಂತು
ಕಾಳೀದೇವಿಗೆ ಬೇಡಿಕೊಂಡನು ಇಂತು ೧

ಅಮ್ಮಮ್ಮಾ ನಮ್ಮೂರು ಬಲು ದೊಡ್ಡದಮ್ಮಾ!
ನಮ್ಮೂರಲಿಹ ಜನ ಕಮ್ಮೀ ಇಲ್ಲಮ್ಮಾ!
ಎರಡು ಲಕ್ಷದ ಮೇಲೆ ಇನ್ನೆಷ್ಟೋ ಸಾವಿರ
ಇರುವರು-ಎಂದು ನಾನರಿತಿಹೆನಮ್ಮಾ! ೨

ದಿನ ದಿನ ಬೆಳಗು-ಸಂಜೆಯೊಳು ಅವರಿಗೆಲ್ಲಾ
ಕುಡಿಯಲು ಬಿಸಿ ಬಿಸಿ ಕಾಫೀ ಬೇಕಮ್ಮಾ!
ಅವರೆಲ್ಲಾ ಕುಡಿಯುವ ಕಾಫಿಯ ಲೆಕ್ಕವ
ವಿವರಿಸಿ ಹೇಳುವೆ, ಕೇಳು ನಮ್ಮಮ್ಮಾ! ೩

ಅಬ್ಬಬ್ಬಾ ! ತೀರ ಕಡಿಮೆಯಾಗಿ ಹಿಡಿದರೂ
ಒಬ್ಬೊಬ್ಬರಿಗೆ ಲೋಟಾ ಎರಡು ಬೇಡೇನೆ ?
ನಾಲ್ಕು ಲೋಟಕೆ ಕಿಟ್ಟಲಿ ತುಂಬುವುದು ಹದಿ-
ನಾಲ್ಕು ಕಿಟ್ಟಲಿಗೊಂದು ಕೊಡ ತುಂಬದೇನೆ ? ೪

ನೂರುಮಂದಿಗೆ ನಾಲ್ಕು ಕೊಡವಾಗುವುದು; ಹತ್ತು-
ನೂರುಮಂದಿಗೆ ನಲವತ್ತು ಆಗುವುದು ;
ಲಕ್ಷ ಮಂದಿಗೆ ನಾಲ್ಕು ಸಾವಿರ ಕೊಡ ಕಾಫೀ
ಲೆಕ್ಕವಾಯಿತೆ-ನಮಗೆಷ್ಟು ಬೇಕೆಂದು ? ೫

ನಮ್ಮೂರ ಜನಕೆಂಟು ಸಾವಿರಕ್ಕೂ ಹೆಚ್ಚು
ಕಮ್ಮನೆಯಾ ಕಾಫೀ ಕೊಡಗಳು ಬೇಕಮ್ಮಾ!
ಒಂದೊಂದೇ ದಿನಕಿಷ್ಟು ಕೊಡಗಳು ಬೇಕಿರೆ,
ಒಂದು ವರುಷಕೆಷ್ಟು ಲೆಕ್ಕ ನೋಡಮ್ಮಾ ! ೬

ಇಂದು ಈ ಲೆಕ್ಕವ ನಾ ಮಾಡಲರಿಯೆನೆ,
ಮುಂದಿನ ವರುಷಕೆ ಮಾಡಿ ಹೇಳುವೆನು !
ಇಂತಹ ಲೆಕ್ಕವ ಮಾಸ್ತರ್ರು ನಮಗಿನ್ನೂ
ಕಲಿಸಿಯೆ ಕೊಟ್ಟಿಲ್ಲ ನಾ ಮಾಡಲೇನು ? ೭

ಆದರು ನಾ ಸುಮಾರಾಗಿ ಹೇಳುವೆನು –
ನಮ್ಮೂರ ವರುಷದ ಕಾಫೀ ಲೆಕ್ಕವನು ;
ವರುಷದ ಕಾಫಿಯು ಸೇರಿ ಕೆಂಪಾಂಬುಧಿ,
ಕೆರೆಯಂಥಾ ಕೆರೆ ತುಂಬುವುದು ತಿಳಿ ನೀನು ! ೮

ಕೆರೆತುಂಬಾ ಕಾಫಿಯ ಕಾಸಬೇಕಾದರೆ,
ವರುಷವೆಲ್ಲವು ಎಷ್ಟು ಶ್ರಮ ನಮಗಮ್ಮಾ!
ಇರುವೆ ನೀ ಸುಮ್ಮನೆ ಕರುಣೆಯು ಬರದೇನೆ ?
ಹರಿಸು ನಮ್ಮಗಳ ಈ ಕೊರತೆಯನಮ್ಮಾ! ೯

ಇನ್ನೇನ ಬೇಡೆನು, ನಿನ್ನನು ಕಾಡೆನು,
ನನ್ನದಿದೊಂದೇ ಕೋರಿಕೆಯು ಕೇಳಮ್ಮಾ!
ಆಪತ್ತು ಬರದಂತೆ ನಮ್ಮೂರ ಜನಕೆಲ್ಲಾ
ಕಾಫಿಯ ಕೆರೆಯೊಂದ ಕೊಡು ನೀ ಕಾಳಮಾ ! ೧೦

ದೋಸೆಯ ಬೆಟ್ಟವೊಂದಿದ್ದರೂ ಬೇಕು,
ಇಲ್ಲದಿದ್ದರೆ ಕಾಫೀ ಕೆರೆಯೊಂದೇ ಸಾಕು!
*****

Tagged:

Leave a Reply

Your email address will not be published. Required fields are marked *

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...