ಸಾಧ್ಯವಹುದೆ?

ಮನುಜ ನೀನೊಮ್ಮೆ ಹಿಂತಿರುಗಿ ನೋಡು
ಎಲ್ಲಿಯದು ಆ ನಿನ್ನ ಪೂರ್‍ವ ಧಾಮ
ಯಾವ ಸಾಧನೆಗೆ ಇಷ್ಟೊಂದು ನಿನ್ನ ಹೋರಾಟ
ಯಾವ ಪುರುಷಾರ್ಥಕ್ಕೆ ಇಷ್ಟೊಂದು ಹುಡುಕಾಟ

ಜನರನ್ನು ಮೆಚ್ಚಿಸಿ ನೀನೇನು ಮಾಡುವುದು
ಸೌಂದರ್‍ಯತೆ ಕಂಡು ನೀನೇನು ಬಯಸುವುದು
ನಿನ್ನಲ್ಲಿದಿಯೇ ಅಂತಹ ಮಹಾ ಸತ್ವ
ಮತ್ತೇಕೆ ಆಸೆಗಳಿಗೆ ಇಷ್ಟೊಂದು ಮಹತ್ವ

ವಿಚಾರ ಶೂನ್ಯವಾಗಿ ವಿಚಾರವಂತನೆ ನೀನು
ಆಚಾರ ಶೂನ್ಯವಾಗಿ ಆಚಾರವಂತನೆ ನೀನು
ದುಡಿದು ಸಂಪಾದಿಸಿದೆ ಯಾರಿಗಾಗಿ ಸಂಪತ್ತು
ನಿನ್ನವರು ಪಡೆಯಬಲ್ಲರೆ ನಿನಗಾದ ವಿಪ್ಪತ್ತು

ಧರ್‍ಮ ಜ್ಞಾನಗಳೆಲ್ಲ ತಿಳಿದು ಮಂಕನಾಗಿದೆ
ಪೂಜೆ ಪುನಸ್ಕಾರಗಳಿಗಾಗಿ ನಿತ್ಯ ಡಾಂಬೀಕನಾದೆ
ನಿನ್ನ ಮನಸ್ಸೆ ನಿನ್ನದಲ್ಲವಾದರೆ ಅಹುದೆ
ಜಗತ್ತು ನಿನ್ನದಾಗಲು ಸಾಧ್ಯವಹುದೆ!

ಎದ್ದೇಳು ಎಚ್ಚರಗೊಳ್ಳು ಇನ್ನು ಕಾಲಮಿಂಚಿಲ್ಲ
ಒಂದೊಂದುಗಳಿಗೆ ನಿರಾಸೆ ತುಂಬಬೇಕಲ್ಲ
ಸಾರ್‍ಥಕ ಬಾಳಿಗೆ ಹರಿನಾಮ ಸ್ಮರಣೆಯೊಂದೇ
ಮಾಣಿಕ್ಯ ವಿಠಲನಾದರೇನು ಬೇಕಿಲ್ಲ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಾಗ್ದೇವಿ – ೫೪
Next post ನಿನ್ನ ಕರುಣೆ

ಸಣ್ಣ ಕತೆ

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

cheap jordans|wholesale air max|wholesale jordans|wholesale jewelry|wholesale jerseys