Home / ಕವನ / ತತ್ವಪದ / ಸಾಧ್ಯವಹುದೆ?

ಸಾಧ್ಯವಹುದೆ?

ಮನುಜ ನೀನೊಮ್ಮೆ ಹಿಂತಿರುಗಿ ನೋಡು
ಎಲ್ಲಿಯದು ಆ ನಿನ್ನ ಪೂರ್‍ವ ಧಾಮ
ಯಾವ ಸಾಧನೆಗೆ ಇಷ್ಟೊಂದು ನಿನ್ನ ಹೋರಾಟ
ಯಾವ ಪುರುಷಾರ್ಥಕ್ಕೆ ಇಷ್ಟೊಂದು ಹುಡುಕಾಟ

ಜನರನ್ನು ಮೆಚ್ಚಿಸಿ ನೀನೇನು ಮಾಡುವುದು
ಸೌಂದರ್‍ಯತೆ ಕಂಡು ನೀನೇನು ಬಯಸುವುದು
ನಿನ್ನಲ್ಲಿದಿಯೇ ಅಂತಹ ಮಹಾ ಸತ್ವ
ಮತ್ತೇಕೆ ಆಸೆಗಳಿಗೆ ಇಷ್ಟೊಂದು ಮಹತ್ವ

ವಿಚಾರ ಶೂನ್ಯವಾಗಿ ವಿಚಾರವಂತನೆ ನೀನು
ಆಚಾರ ಶೂನ್ಯವಾಗಿ ಆಚಾರವಂತನೆ ನೀನು
ದುಡಿದು ಸಂಪಾದಿಸಿದೆ ಯಾರಿಗಾಗಿ ಸಂಪತ್ತು
ನಿನ್ನವರು ಪಡೆಯಬಲ್ಲರೆ ನಿನಗಾದ ವಿಪ್ಪತ್ತು

ಧರ್‍ಮ ಜ್ಞಾನಗಳೆಲ್ಲ ತಿಳಿದು ಮಂಕನಾಗಿದೆ
ಪೂಜೆ ಪುನಸ್ಕಾರಗಳಿಗಾಗಿ ನಿತ್ಯ ಡಾಂಬೀಕನಾದೆ
ನಿನ್ನ ಮನಸ್ಸೆ ನಿನ್ನದಲ್ಲವಾದರೆ ಅಹುದೆ
ಜಗತ್ತು ನಿನ್ನದಾಗಲು ಸಾಧ್ಯವಹುದೆ!

ಎದ್ದೇಳು ಎಚ್ಚರಗೊಳ್ಳು ಇನ್ನು ಕಾಲಮಿಂಚಿಲ್ಲ
ಒಂದೊಂದುಗಳಿಗೆ ನಿರಾಸೆ ತುಂಬಬೇಕಲ್ಲ
ಸಾರ್‍ಥಕ ಬಾಳಿಗೆ ಹರಿನಾಮ ಸ್ಮರಣೆಯೊಂದೇ
ಮಾಣಿಕ್ಯ ವಿಠಲನಾದರೇನು ಬೇಕಿಲ್ಲ
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...