ದೇವಿ ಮಾನ್ಯ

ಮಾತೆ ಭುವನೇಶ್ವರಿ ಜಗನ್ಮಾತೆ
ನನ್ನನ್ನು ಮಾಯೆಯಿಂದ ನಿ ಕಾಪಾಡು
ನೀನು ಎನ್ನ ಕೈ ಬಿಟ್ಟ ಮೇಲೆ
ನಾನು ಬದುಕುಳಿಯುವದೇ ಇದು ಕಾಡು

ವಿಷಯ ಸುಖಕ್ಕೆ ಇಂದ್ರಿಯಗಳ ಚಡಪಡಿಕೆ
ಮನಸ್ಸು ಇಂದ್ರಿಯಗಳ ಮೇಲೆ ಸವಾರಿ
ಅವುಗಳ ನಡುವೆ ನಾನು ಅನಾಥ
ನರಕವೇ ಗತಿ ನಾ ಜನುಮಗಳ ಸುತ್ತುತ್ತ

ಸಾವಿವೆಂಬ ಘೋರ ತಮಸ ಗರ್ಭದಲಿ
ಕರಗಿ ಹೋಗಿ ನಾನು ಕಂಗಾಲಾಗಿರುವೆ
ಅದಕ್ಕೂ ಮುಂಚೆ ನನ್ನೆಳೆದು ರಕ್ಷಿಸು
ನಾನಿನ್ನ ಪಾದಗಳಲಿ ಎರಗುವೆ

ನಿ ನನ್ನ ಜೀವನವ ಆಡಿಸುತ್ತಿರುವವಳು
ನೀನೇ ನನ್ನ ಯಂತ್ರದ ಒಡೆಯಳು
ನೀ ನಾಡಿಸುವ ಗೊಂಬೆ ನಾನು
ನೀ ದಯೆ ತೋರಿ ಎನ್ನ ರಕ್ಷಿಪಳು

ಹೌದು ಈಗ ಅರಿತಿರುವೆ ನಾ ಹೀನಧನ್ಯ
ನನ್ನ ಬದುಕಿನ ದೇವತೆ ನೀ ಅನನ್ಯ
ಇನ್ನು ಮುಂದೆ ಎಂದೆಂದು ಪಾತಾಳಕ್ಕೆ
ದೂಡದೆ, ಮಾಣಿಕ್ಯ ವಿಠಲನಾಗಿಸು ಮಾನ್ಯ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸುಭದ್ರೆ – ೨
Next post ಜಯ ಭಾರತ

ಸಣ್ಣ ಕತೆ

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ಬ್ರಿಟನ್ ದಂಪತಿಗಳ ಪ್ರೇಮ ದಾಖಲೆ

    ಫ್ರಾಂಕ್ ಆಗ ಇನ್ನು ಹದಿನಾಲ್ಕು ವರ್ಷದ ಹುಡುಗ ತೆಳ್ಳಗೆ ಬೆಳ್ಳಗೆ ಇದ್ದು, ಕರಿಯ ಬಣ್ಣದ ದಟ್ಟ ಕೂದಲಿನ ಬ್ರಿಟಿಷ್ ಬಾಲಕ. ಹೈಸ್ಕೂಲಿನಲ್ಲಿ ಓದುತ್ತಿದ್ದ ಫ್ರಾಂಕ್‌ಗೆ ಕಾಲ್ಚೆಂಡು ಆಟ… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

cheap jordans|wholesale air max|wholesale jordans|wholesale jewelry|wholesale jerseys