ದೇವಿ ಮಾನ್ಯ

ಮಾತೆ ಭುವನೇಶ್ವರಿ ಜಗನ್ಮಾತೆ
ನನ್ನನ್ನು ಮಾಯೆಯಿಂದ ನಿ ಕಾಪಾಡು
ನೀನು ಎನ್ನ ಕೈ ಬಿಟ್ಟ ಮೇಲೆ
ನಾನು ಬದುಕುಳಿಯುವದೇ ಇದು ಕಾಡು

ವಿಷಯ ಸುಖಕ್ಕೆ ಇಂದ್ರಿಯಗಳ ಚಡಪಡಿಕೆ
ಮನಸ್ಸು ಇಂದ್ರಿಯಗಳ ಮೇಲೆ ಸವಾರಿ
ಅವುಗಳ ನಡುವೆ ನಾನು ಅನಾಥ
ನರಕವೇ ಗತಿ ನಾ ಜನುಮಗಳ ಸುತ್ತುತ್ತ

ಸಾವಿವೆಂಬ ಘೋರ ತಮಸ ಗರ್ಭದಲಿ
ಕರಗಿ ಹೋಗಿ ನಾನು ಕಂಗಾಲಾಗಿರುವೆ
ಅದಕ್ಕೂ ಮುಂಚೆ ನನ್ನೆಳೆದು ರಕ್ಷಿಸು
ನಾನಿನ್ನ ಪಾದಗಳಲಿ ಎರಗುವೆ

ನಿ ನನ್ನ ಜೀವನವ ಆಡಿಸುತ್ತಿರುವವಳು
ನೀನೇ ನನ್ನ ಯಂತ್ರದ ಒಡೆಯಳು
ನೀ ನಾಡಿಸುವ ಗೊಂಬೆ ನಾನು
ನೀ ದಯೆ ತೋರಿ ಎನ್ನ ರಕ್ಷಿಪಳು

ಹೌದು ಈಗ ಅರಿತಿರುವೆ ನಾ ಹೀನಧನ್ಯ
ನನ್ನ ಬದುಕಿನ ದೇವತೆ ನೀ ಅನನ್ಯ
ಇನ್ನು ಮುಂದೆ ಎಂದೆಂದು ಪಾತಾಳಕ್ಕೆ
ದೂಡದೆ, ಮಾಣಿಕ್ಯ ವಿಠಲನಾಗಿಸು ಮಾನ್ಯ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸುಭದ್ರೆ – ೨
Next post ಜಯ ಭಾರತ

ಸಣ್ಣ ಕತೆ

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…