ದೇವಿ ಮಾನ್ಯ

ಮಾತೆ ಭುವನೇಶ್ವರಿ ಜಗನ್ಮಾತೆ
ನನ್ನನ್ನು ಮಾಯೆಯಿಂದ ನಿ ಕಾಪಾಡು
ನೀನು ಎನ್ನ ಕೈ ಬಿಟ್ಟ ಮೇಲೆ
ನಾನು ಬದುಕುಳಿಯುವದೇ ಇದು ಕಾಡು

ವಿಷಯ ಸುಖಕ್ಕೆ ಇಂದ್ರಿಯಗಳ ಚಡಪಡಿಕೆ
ಮನಸ್ಸು ಇಂದ್ರಿಯಗಳ ಮೇಲೆ ಸವಾರಿ
ಅವುಗಳ ನಡುವೆ ನಾನು ಅನಾಥ
ನರಕವೇ ಗತಿ ನಾ ಜನುಮಗಳ ಸುತ್ತುತ್ತ

ಸಾವಿವೆಂಬ ಘೋರ ತಮಸ ಗರ್ಭದಲಿ
ಕರಗಿ ಹೋಗಿ ನಾನು ಕಂಗಾಲಾಗಿರುವೆ
ಅದಕ್ಕೂ ಮುಂಚೆ ನನ್ನೆಳೆದು ರಕ್ಷಿಸು
ನಾನಿನ್ನ ಪಾದಗಳಲಿ ಎರಗುವೆ

ನಿ ನನ್ನ ಜೀವನವ ಆಡಿಸುತ್ತಿರುವವಳು
ನೀನೇ ನನ್ನ ಯಂತ್ರದ ಒಡೆಯಳು
ನೀ ನಾಡಿಸುವ ಗೊಂಬೆ ನಾನು
ನೀ ದಯೆ ತೋರಿ ಎನ್ನ ರಕ್ಷಿಪಳು

ಹೌದು ಈಗ ಅರಿತಿರುವೆ ನಾ ಹೀನಧನ್ಯ
ನನ್ನ ಬದುಕಿನ ದೇವತೆ ನೀ ಅನನ್ಯ
ಇನ್ನು ಮುಂದೆ ಎಂದೆಂದು ಪಾತಾಳಕ್ಕೆ
ದೂಡದೆ, ಮಾಣಿಕ್ಯ ವಿಠಲನಾಗಿಸು ಮಾನ್ಯ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸುಭದ್ರೆ – ೨
Next post ಜಯ ಭಾರತ

ಸಣ್ಣ ಕತೆ

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…