Home / ಕವನ / ತತ್ವಪದ / ಮೋಸ ಹೋಗದಿರು

ಮೋಸ ಹೋಗದಿರು

ದೇವರ ತಾಣವೆಲ್ಲಿ! ಎಂದು ಅರಸುತ್ತ
ಪಯಣವಿದು ಸಾಗುತ್ತಿದೆ ದೇವರೆಡೆಗೆ
ಬದುಕು ಇದು ಭವಪಾಶದತ್ತ ಸಾಗುವಾಗ
ಆತ್ಮವಿದು ವಾಲುತ್ತಿದೆ ತನ್ನ ಒಡೆಯನಡೆಗೆ

ಸುಖ ಸುಖ ಸುಖವೆಂದು ಅನವರತವು
ಹೋರಾಡುತ್ತಿರುವೆ ಆಸೆಗಳೊಂದಿಗೆ ನೀನು
ಆಸೆಗಳೆ ನಿನ್ನ ಮೃತ್ಯ ಕೂಪಗಳಾಗಿ
ಯೋಜಿಸುತ್ತಿವೆ ನಿನ್ನ ಪ್ರಪಾತಕ್ಕೆಳೆಯಲು

ಬಂಧು ಮಿತ್ರರೆಲ್ಲರೂ ನಿನ್ನ ನಂಬಿದವರು
ಸ್ವಾರ್ಥದಿಂದ ಅವರು ನಿನ್ನವರಾಗಿಹರು
ನೀನು ಅವರನ್ನು ಕಾಪಾಡದಿರೆ ಆಯ್ತು
ನಿನ್ನನ್ನೆ ಆಚೆತಳ್ಳಲು ಸಾಲಾಗಿ ನಿಂತಿಹರು

ಸಾಧು ಸಂತರ ಸೇವೆಗೆ ಹಗಲಿರುಳು ಶ್ರಮಿಸು
ನಿನ್ನ ಪಥಚಾಲಕರೆ ಅವರು ಸತ್ಯ
ಇಲ್ಲಿರುವೆದೆಲ್ಲ ಬರೀ ಮಾಯೆ ಮೋಹ
ಬರೀ ಸೊನ್ನೆ ಬಿದ್ದು ಹೋಗಲು ದೇಹ

ಸಹಕರಿಸಲು ನಿಂತಿರುವೆ ಇಂದ್ರಿಯಗಳೊಂದಿಗೆ
ದುಡಿಸುಕೊಳ್ಳು ನಿನ್ನ ಪಾರಮಾರ್ಥಕ್ಕೆ
ನಾಳಿನ ಭಾಗ್ಯಕ್ಕೆ ಇವರೆಲ್ಲ ಕಾರಣರಾಗಲಿ
ನೀನು ಮಾಣಿಕ್ಯ ವಿಠಲನಾಗಿರಲಿ
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...