Home / ಕವನ / ತತ್ವಪದ / ಪರಶಿವನ ಗೆಲ್ಲು

ಪರಶಿವನ ಗೆಲ್ಲು

ಭಕ್ತ ನಿನಗೊಂದು ಕಿವಿಮಾತು
ಮಾಡದಿರು ಬಾಳು ವ್ಯಸನದಿ ತೂತು
ನಾಳಿನ ಭವಿಷ್ಯಕ್ಕೆ ಇಂದು ಚಿಂತೇಕೆ!
ಕ್ಷಣಿಕ ಬದುಕಿಗೆ ಕೋಟಿ ಆಸೆಗಳೇಕೆ

ಆ ಪರಶಿವನೆ ನಿನ್ನ ಪರಮಾತ್ಮ
ಪಾರ್‍ವತಿಯೇ ನಿನ್ನ ಮನಸ್ಸು ಹೌದು
ಪ್ರಾಣಗಳೇ ಸಹಚರರು ದೇಹವೆ ಮನೆ
ಇಂದ್ರಿಯ ಕ್ರಿಯೆಗಳೇ ನಿನ್ನ ಪೂಜೆ

ನಿದ್ರೆಯೇ ನಿನ್ನ ಸಮಾಧಿ ಸ್ಥಿತಿ
ನಿನ್ನ ಸಂಚಾರವೆಲ್ಲ ಪ್ರದಕ್ಷಿಣೆ ರೀತಿ
ಆಡುವ ಮಾತೇ ಅವನಸ್ತುತಿ
ಮಾಡುವ ಕಾರ್‍ಯಗಳ ಆರಾಧನೆ ಪ್ರೀತಿ

ದೇಹವೇರಥ ಆತ್ಮನೆ ರಥಿ
ಬುದ್ಧಿಯೇ ಸಾರಥಿ ಬಾಳಿಗೆಲ್ಲ
ಮನಸ್ಸೆ ಹುರಿ ಇಂದ್ರಿಯಗಳೇ ಅಶ್ವಗಳು
ದೇವನೆಡೆಗೆ ಹೋಗದೆ ವಿಧಿ ಇಲ್ಲ

ಆಧ್ಯಾತ್ಮಿಕ ದಾರಿಯಲಿ ಬ್ರಹ್ಮಚರ್ಯ
ಪಾಲಿಸು ಸತತ ಏಕಾಗ್ರದಲ್ಲಿ
ಕಾಮನಿರುವಲ್ಲಿ ರಾಮನಿಲ್ಲ
ತುಲಸಿದಾಸರ ವಾಣಿ ನೆನೆ ಮನದಲ್ಲಿ

ಬಿದ್ದು ಹೋಗುವ ತನುವಿಗೆ ಅಭಿಮಾನವೇ
ಜಡ್ಡು ದುರಹಂಕಾರ ಬಿಗು ಮಾನವೇ
ಎಲ್ಲವನ್ನು ಆಚೆ ತಳ್ಳಿ ಎದ್ದು ನಿಲ್ಲು
ಮಾಣಿಕ್ಯ ವಿಠಲನ ಭಾವಗೆಲ್ಲು
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...