ಲೋಕದ ಮನೆ

ಲೋಕದ ಮನೆ ಇದು ಕರ್‍ಮ ಭೂಮಿ
ಕರ್‍ಮಕ್ಕೆ ಮೂಲಾಧಾರ ಮನವು ಹೌದು
ಮನಸ್ಸನ್ನು ಬಿಡದಂತೆ ನಿಗ್ರಹಿಸು ಜೋಕೆ
ಮನವು ಹೇಳಿದಂತೆ ನಿ ಓಡಲೇಕೆ!

ಕಷ್ಟವೊ ಸುಖವೊ ಸಾಂತ್ವನದಿ ಸ್ವೀಕರಿಸು
ಕಷ್ಟಗಳ ನಡುವೆಯೂ ಶಿವನ ಅನುಭವಿಸು
ಈ ಬಾಳೇ ನಿನಗೊಂದು ಪರೀಕ್ಷಾ ಕೇಂದ್ರ
ಉತ್ತೀರ್‍ಣನಾದರಾಯ್ತು ನೀ ನಾಗುವೆ ಇಂದ್ರ

ಪ್ರತಿಯೊಂದು ಮಾಡುವಾಗ ಯೋಚನೆ ಇರಲಿ
ಆ ದೇವರನ್ನು ಕಾಣುವ ಯೋಜನೆ ಇರಲಿ
ನಿನ್ನವರೆಲ್ಲ ನಿನ್ನ ದೇಹಕ್ಕೆ ಸಂಬಂಧವಿರಲಿ
ನಿನ್ನಾತ್ಮ ಮಾತ್ರ ಭಗವನಗೆ ಅರ್‍ಪಿಸಿರಲಿ

ಧ್ಯಾನ ಮಾಡು ನಿತ್ಯ ಶಿವನ ಪರಾಕಾಷ್ಠೆಯಲಿ
ನಿನ್ನ ಪ್ರ್‍ಆರ್‍ಥನೆಯಲ್ಲಿ ಸರ್‍ವರ ಕಲ್ಯಾಣವಿರಲಿ
ಮನದಲಿ ನೂರೆಂಟು ಚಿಂತೆಗಳು ಬೇಡ
ಆ ಕೆಟ್ಟ ವಿಕಾರಗಳಿಗೆ ಅವಕಾಶಬೇಡ

ನಡೆ ನುಡಿಯು ನಿನ್ನದು ಶುದ್ಧವಿರಲಿ
ನಿರ್‍ಭಾವ ನಿರಹಂಕಾರ ನಿನ್ನದಾಗಿರಲಿ
ಲಭಿಸುವವು ಆಗ ಶಾಂತಿ ಆನಂದ
ಮಾಣಿಕ್ಯ ವಿಠಲನೇ ಭಗವದಾನಂದ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸುಭದ್ರೆ – ೧೩
Next post ಎದ್ದೇಳಿ ಎದ್ದೇಳಿ ಸೋದರರೇ

ಸಣ್ಣ ಕತೆ

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

cheap jordans|wholesale air max|wholesale jordans|wholesale jewelry|wholesale jerseys