ಎಲ್ಲಿರುವೆ ವಾಣಿ, ಮರೆತೆಯ ಹೇಗೆ ಇಷ್ಟು ದಿನ

ಎಲ್ಲಿರುವೆ ವಾಣಿ, ಮರೆತೆಯ ಹೇಗೆ ಇಷ್ಟು ದಿನ
ನಿನ್ನ ಬಲಸತ್ವಗಳ ಉದ್ದೀಪಿಸುವ ಮೂಲ?
ಬೀಳುಕವಿತೆಗೆ ನೀಡಿ ರಸೋದ್ದೀಪನವನ್ನ,
ಸಣ್ಣದಕೆ ಬಣ್ಣಗಳ ತೀಡಿ ಬಾರಿಸಿ ತಾಳ?
ಮರಳಿ ಬಾ ಮರುಳೆ, ಮೈಗಳ್ಳತನದಲಿ ಕಳೆದ
ಕಾಲಕ್ಕೆ ಸಮನಾಗಿ ಮಧುರ ಕವಿತೆಯ ನುಡಿಸು,
ನಿನ್ನ ಬೆಲೆ ಬಲ್ಲ, ನಿನ್ನೆಲ್ಲ ಜಾಣ್ಮೆಗೆ ಕಲೆಗೆ
ಮೀಟು ಕೊಡಬಲ್ಲ ಹೃದಯಗಳನ್ನು ನೀ ಕುಣಿಸು.
ಏಳು ವಾಣಿಯೆ, ನನ್ನ ಪ್ರಿಯನ ಮಧುಮುಖದಲ್ಲಿ
ಕಾಲವೇನಾದರೂ ಗೆರೆ ಕೊರೆದಿದೆಯ ನೋಡು;
ಇದ್ದಲ್ಲಿ, ಕೊರಗು ಸೊರಗನ್ನೆ ಗೇಲಿಗೆ ತಳ್ಳಿ,
ಕೊಳ್ಳೆ ಹೊಡೆವನು ಕಾಲ ಎನುವುದನೆ ಹುಸಿಮಾಡು,
ಕಾಲನಿಗು ಬೇಗ ನನ್ನೊಲವ ಕೀರ್ತಿಯ ಬೆಳೆಸು,
ಅವನ ಕುಡುಗೋಲು ಕೊಡಲಿಗಳಿಂದ ರಕ್ಷಿಸು.
*****
ಮೂಲ: ವಿಲಿಯಂ ಷೇಕ್ಸ್‌ಪಿಯರ್
Sonnet 100
Where art thou, Muse, that thou forget’st so long

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ರಾವಣಾಂತರಂಗ – ೨೨
Next post ಕಂದರ

ಸಣ್ಣ ಕತೆ

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

cheap jordans|wholesale air max|wholesale jordans|wholesale jewelry|wholesale jerseys