ಅಯ್ಯೋ, ಕಂಡಲ್ಲೆಲ್ಲ ಅಲೆದೆ, ಮಂದಿಯ ಮುಂದೆ
ಕೋಡಂಗಿ ವೇಷದಲಿ ಕುಣಿದೆ ಒಳಗನ್ನಿರಿದೆ,
ಹೊನ್ನನೆ ಹರಾಜು ಹಾಕಿದೆ ಹತ್ತು ಪೈಸಕ್ಕೆ,
ಹಲುಬಿ ಹೊಸ ಸ್ನೇಹಕ್ಕೆ ಹಳೆಯದರ ಮುಖ ಮುರಿದೆ.
ಸತ್ಯಕ್ಕೆ ಸೊಪ್ಪು ಹಾಕದೆ ಸೊಟ್ಟ ನಡೆದದ್ದು
ನುಡಿದದ್ದು ಸುಳ್ಳಲ್ಲ ಆದರೂ ಈ ಎಲ್ಲ
ಎದೆಯಲ್ಲಿ ಯೌವನದ ಹೊಸ ಕಿಚ್ಚು ಹಚ್ಚಿದ್ದು
ನಿಜ. ಕೆಟ್ಟು ಕಡೆಗರಿತೆ ನಿನ್ನೊಲವಿಗೆಣೆಯಿಲ್ಲ.
ಎಲ್ಲ ಮುಗಿಯಿತು, ಅಸ್ತು ಎನ್ನು ಉಳಿದದ್ದನ್ನು,
ಮತ್ತೆ ಎಂದೆಂದೂ ನಡೆಯದು ತಪ್ಪು ನನ್ನಿಂದ ;
ನನ್ನೊಲವಿನಧಿದೈವವನ್ನು, ಹಳೆಕೆಳೆಯನ್ನು
ಕೆಣಕುವವನಲ್ಲ ಹೊಸ ಹೊಸ ಅಳತೆಗೋಲಿಂದ.
ಪ್ರೀತಿ ತುಳುಕುವ ನಿನ್ನ ಹೃದಯ ಸಮ ಸ್ವರ್ಗಕ್ಕೆ,
ನನಗಿರಲಿ ಸ್ವಾಗತ ಅಂಥ ಹೃದಯದೊಳಕ್ಕೆ;
*****
ಮೂಲ: ವಿಲಿಯಂ ಷೇಕ್ಸ್ಪಿಯರ್
Sonnet 110
Alsa, `tis true I have gone here and there
Related Post
ಸಣ್ಣ ಕತೆ
-
ವಿರೇಚನೆ
ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…
-
ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು
ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…
-
ಗುಲ್ಬಾಯಿ
ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…
-
ಮನೆಮನೆಯ ಸಮಾಚಾರ
ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…
-
ಪಾಠ
ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…