ಅಯ್ಯೋ, ಕಂಡಲ್ಲೆಲ್ಲ ಅಲೆದೆ, ಮಂದಿಯ ಮುಂದೆ

ಅಯ್ಯೋ, ಕಂಡಲ್ಲೆಲ್ಲ ಅಲೆದೆ, ಮಂದಿಯ ಮುಂದೆ
ಕೋಡಂಗಿ ವೇಷದಲಿ ಕುಣಿದೆ ಒಳಗನ್ನಿರಿದೆ,
ಹೊನ್ನನೆ ಹರಾಜು ಹಾಕಿದೆ ಹತ್ತು ಪೈಸಕ್ಕೆ,
ಹಲುಬಿ ಹೊಸ ಸ್ನೇಹಕ್ಕೆ ಹಳೆಯದರ ಮುಖ ಮುರಿದೆ.
ಸತ್ಯಕ್ಕೆ ಸೊಪ್ಪು ಹಾಕದೆ ಸೊಟ್ಟ ನಡೆದದ್ದು
ನುಡಿದದ್ದು ಸುಳ್ಳಲ್ಲ ಆದರೂ ಈ ಎಲ್ಲ
ಎದೆಯಲ್ಲಿ ಯೌವನದ ಹೊಸ ಕಿಚ್ಚು ಹಚ್ಚಿದ್ದು
ನಿಜ. ಕೆಟ್ಟು ಕಡೆಗರಿತೆ ನಿನ್ನೊಲವಿಗೆಣೆಯಿಲ್ಲ.
ಎಲ್ಲ ಮುಗಿಯಿತು, ಅಸ್ತು ಎನ್ನು ಉಳಿದದ್ದನ್ನು,
ಮತ್ತೆ ಎಂದೆಂದೂ ನಡೆಯದು ತಪ್ಪು ನನ್ನಿಂದ ;
ನನ್ನೊಲವಿನಧಿದೈವವನ್ನು, ಹಳೆಕೆಳೆಯನ್ನು
ಕೆಣಕುವವನಲ್ಲ ಹೊಸ ಹೊಸ ಅಳತೆಗೋಲಿಂದ.
ಪ್ರೀತಿ ತುಳುಕುವ ನಿನ್ನ ಹೃದಯ ಸಮ ಸ್ವರ್‍ಗಕ್ಕೆ,
ನನಗಿರಲಿ ಸ್ವಾಗತ ಅಂಥ ಹೃದಯದೊಳಕ್ಕೆ;
*****
ಮೂಲ: ವಿಲಿಯಂ ಷೇಕ್ಸ್‌ಪಿಯರ್
Sonnet 110
Alsa, `tis true I have gone here and there

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ರಂಗಣ್ಣನ ಕನಸಿನ ದಿನಗಳು – ೧೬
Next post ಹೊಂಬಣ್ಣದ ಗೆರೆಗಳು

ಸಣ್ಣ ಕತೆ

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

cheap jordans|wholesale air max|wholesale jordans|wholesale jewelry|wholesale jerseys