ಕೊಳಕು ಕಥೆ ನನ್ನ ಮೋರೆಗೆ ಬಳಿದ ಮಸಿಯನ್ನು

ಕೊಳಕು ಕಥೆ ನನ್ನ ಮೋರೆಗೆ ಬಳಿದ ಮಸಿಯನ್ನು
ಒರೆಸಿ ತೊಳೆಯುತ್ತಲಿದೆ ನಿನ್ನೊಲುಮೆ ಕರುಣೆ ಜಲ;
ತಪ್ಪ ಬದಿಗೊತ್ತಿ ಒಪ್ಪಿರಲು ನೀ ಗುಣವನ್ನು
ಲಕ್ಷ್ಯ ಮಾಡುವೆನೆ ಯಾರದೊ ನಿಂದೆ ಸ್ತೋತ್ರಗಳ?
ನನ್ನೆಲ್ಲ ಲೋಕ ನೀನೇ, ನಿನ್ನ ಮುಖದಿಂದ
ಬಂದುದಷ್ಟೇ ನನ್ನ ನಿಜದ ನಿಂದೆ ಪ್ರಶಂಸೆ,
ಯಾರು ನನಗಿನ್ನು? ಬದಲಿಸಬರದು ಪರರಿಂದ
ಸರಿಯೊ ತಪ್ಪೋ ನನ್ನ ನಿರ್ಧಾರ ಆಕಾಂಕ್ಷೆ.
ಅನ್ಯರಾಡಿದ್ದಕ್ಕೆ ಅನ್ನಿಸಿದ್ದನ್ನೆಲ್ಲ
ಆಳಬಾವಿಗೆ ಹಾಕಿ ಹೂಳುವೆನು. ಕಹಿಮಾತು
ಸಿಹಿಮಾತು ಎರಡಕ್ಕು ನನಗಿನ್ನು ಕಿವಿಯಿಲ್ಲ,
ಈ ಎಲ್ಲ ಮಾತಿಗೂ ನೀನೊಬ್ಬನೇ ಹೊರತು.
ನನ್ನ ಚಿಂತನೆಯಾಳದಲ್ಲಿ ಬೇರಿಳಿಸಿರುವೆ
ನಿನ್ನುಳಿದು ನನಗೆ ಇಡಿ ಲೋಕವೇ ಸತ್ತಿದೆ.
*****
ಮೂಲ: ವಿಲಿಯಂ ಷೇಕ್ಸ್‌ಪಿಯರ್
Sonnet 112
Your love and pity doth the impression fill

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ರಂಗಣ್ಣನ ಕನಸಿನ ದಿನಗಳು – ೧೭
Next post ಹೊಸದೊಂದು ಪ್ರೀತಿ

ಸಣ್ಣ ಕತೆ

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…