ಕೊಳಕು ಕಥೆ ನನ್ನ ಮೋರೆಗೆ ಬಳಿದ ಮಸಿಯನ್ನು
ಒರೆಸಿ ತೊಳೆಯುತ್ತಲಿದೆ ನಿನ್ನೊಲುಮೆ ಕರುಣೆ ಜಲ;
ತಪ್ಪ ಬದಿಗೊತ್ತಿ ಒಪ್ಪಿರಲು ನೀ ಗುಣವನ್ನು
ಲಕ್ಷ್ಯ ಮಾಡುವೆನೆ ಯಾರದೊ ನಿಂದೆ ಸ್ತೋತ್ರಗಳ?
ನನ್ನೆಲ್ಲ ಲೋಕ ನೀನೇ, ನಿನ್ನ ಮುಖದಿಂದ
ಬಂದುದಷ್ಟೇ ನನ್ನ ನಿಜದ ನಿಂದೆ ಪ್ರಶಂಸೆ,
ಯಾರು ನನಗಿನ್ನು? ಬದಲಿಸಬರದು ಪರರಿಂದ
ಸರಿಯೊ ತಪ್ಪೋ ನನ್ನ ನಿರ್ಧಾರ ಆಕಾಂಕ್ಷೆ.
ಅನ್ಯರಾಡಿದ್ದಕ್ಕೆ ಅನ್ನಿಸಿದ್ದನ್ನೆಲ್ಲ
ಆಳಬಾವಿಗೆ ಹಾಕಿ ಹೂಳುವೆನು. ಕಹಿಮಾತು
ಸಿಹಿಮಾತು ಎರಡಕ್ಕು ನನಗಿನ್ನು ಕಿವಿಯಿಲ್ಲ,
ಈ ಎಲ್ಲ ಮಾತಿಗೂ ನೀನೊಬ್ಬನೇ ಹೊರತು.
ನನ್ನ ಚಿಂತನೆಯಾಳದಲ್ಲಿ ಬೇರಿಳಿಸಿರುವೆ
ನಿನ್ನುಳಿದು ನನಗೆ ಇಡಿ ಲೋಕವೇ ಸತ್ತಿದೆ.
*****
ಮೂಲ: ವಿಲಿಯಂ ಷೇಕ್ಸ್ಪಿಯರ್
Sonnet 112
Your love and pity doth the impression fill
Related Post
ಸಣ್ಣ ಕತೆ
-
ವಿಷಚಕ್ರ
"ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…
-
ಮೌನರಾಗ
ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…
-
ಧನ್ವಂತರಿ
ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…
-
ಅಂತರಂಗ ಶುದ್ಧಿ ಬಹಿರಂಗ ಶುದ್ಧಿ
ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…
-
ಏಕಾಂತದ ಆಲಾಪ
ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…