ಒಲಿದ ಮನಗಳ ಮಿಲನಕಿಲ್ಲ ತಡೆ, ಇದೆಯೆನಲು
ಒಪ್ಪುವವ ನಾನಲ್ಲ. ಒಲವು ಒಲವೇ ಅಲ್ಲ
ಮತ್ತೊಂದಕೆಂದು ಹೊರಳಿದರೆ, ಇಲ್ಲವೆ ಒಂದು
ಬದಲಿತೆಂದಿನ್ನೊಂದು ಕದಲಿದರೆ. ಛೆ, ಇಲ್ಲ
ಬಿರುಗಾಳಿಯಲ್ಲು ಕಂಪಿಸದೆ ನಿಲ್ಲುವುದು ಅದು
ಸ್ಥಿರವಾದ ಜ್ಯೋತಿ, ಕಡಲಲ್ಲಿ ಕುರುಡಲೆಯುವಾ
ಯಾವುದೇ ದೋಣಿಗದು ಧ್ರುವತಾರೆ : ಅಳೆಯುವುದು
ಸಾಧ್ಯವಿರಬಹುದು ಅದರೆತ್ತೆರವ, ನಿಜಬೆಲೆಯ
ತಿಳಿವ ಯತ್ನವು ಮಾತ್ರ ವ್ಯರ್ಥ. ಜವರಾಯನ
ಪಾಶಕೊಳಗಾದರೂ ಗುಲಾಬಿ ತುಟಿ ಕೆನ್ನೆಗಳು,
ಮೋಸಹೋಗದು ಪ್ರೀತಿ. ಕಾಲನ ಗಳಿಗೆ ವಾರ
ಕದಲಿಸವು ಅವನು, ಉಳಿಯುವುದು ಪ್ರಳಯದವರೆಗು.
ಸತ್ಯಸ್ಯ ಸತ್ಯ ಈ ಮಾತು, ಆಯಿತೊ ಸುಳ್ಳು
ನಾನು ಬರೆದುದೆ ಸುಳ್ಳು, ಜನ ಒಲಿದುದೇ ಸುಳ್ಳು.
*****
ಮೂಲ: ವಿಲಿಯಂ ಷೇಕ್ಸ್ಪಿಯರ್
Sonnet 116
Let me not to the marriage of true minds
Related Post
ಸಣ್ಣ ಕತೆ
-
ಆನುಗೋಲು
ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…
-
ಇನ್ನೊಬ್ಬ
ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…
-
ಕರಿ ನಾಗರಗಳು
ಚಿತ್ರ: ಆಂಬರ್ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್ ನೀರು ಹರಿಯುತ್ತಿದ್ದ… Read more…
-
ಅಹಮ್ ಬ್ರಹ್ಮಾಸ್ಮಿ
ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…
-
ಕೆಂಪು ಲುಂಗಿ
ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…