ಒಲಿದ ಮನಗಳ ಮಿಲನಕಿಲ್ಲ ತಡೆ, ಇದೆಯೆನಲು

ಒಲಿದ ಮನಗಳ ಮಿಲನಕಿಲ್ಲ ತಡೆ, ಇದೆಯೆನಲು
ಒಪ್ಪುವವ ನಾನಲ್ಲ. ಒಲವು ಒಲವೇ ಅಲ್ಲ
ಮತ್ತೊಂದಕೆಂದು ಹೊರಳಿದರೆ, ಇಲ್ಲವೆ ಒಂದು
ಬದಲಿತೆಂದಿನ್ನೊಂದು ಕದಲಿದರೆ. ಛೆ, ಇಲ್ಲ
ಬಿರುಗಾಳಿಯಲ್ಲು ಕಂಪಿಸದೆ ನಿಲ್ಲುವುದು ಅದು
ಸ್ಥಿರವಾದ ಜ್ಯೋತಿ, ಕಡಲಲ್ಲಿ ಕುರುಡಲೆಯುವಾ
ಯಾವುದೇ ದೋಣಿಗದು ಧ್ರುವತಾರೆ : ಅಳೆಯುವುದು
ಸಾಧ್ಯವಿರಬಹುದು ಅದರೆತ್ತೆರವ, ನಿಜಬೆಲೆಯ
ತಿಳಿವ ಯತ್ನವು ಮಾತ್ರ ವ್ಯರ್‍ಥ. ಜವರಾಯನ
ಪಾಶಕೊಳಗಾದರೂ ಗುಲಾಬಿ ತುಟಿ ಕೆನ್ನೆಗಳು,
ಮೋಸಹೋಗದು ಪ್ರೀತಿ. ಕಾಲನ ಗಳಿಗೆ ವಾರ
ಕದಲಿಸವು ಅವನು, ಉಳಿಯುವುದು ಪ್ರಳಯದವರೆಗು.
ಸತ್ಯಸ್ಯ ಸತ್ಯ ಈ ಮಾತು, ಆಯಿತೊ ಸುಳ್ಳು
ನಾನು ಬರೆದುದೆ ಸುಳ್ಳು, ಜನ ಒಲಿದುದೇ ಸುಳ್ಳು.
*****
ಮೂಲ: ವಿಲಿಯಂ ಷೇಕ್ಸ್‌ಪಿಯರ್
Sonnet 116
Let me not to the marriage of true minds

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ರಂಗಣ್ಣನ ಕನಸಿನ ದಿನಗಳು – ೧೮
Next post ಜೀವನ

ಸಣ್ಣ ಕತೆ

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…