ಒಲಿದ ಮನಗಳ ಮಿಲನಕಿಲ್ಲ ತಡೆ, ಇದೆಯೆನಲು
ಒಪ್ಪುವವ ನಾನಲ್ಲ. ಒಲವು ಒಲವೇ ಅಲ್ಲ
ಮತ್ತೊಂದಕೆಂದು ಹೊರಳಿದರೆ, ಇಲ್ಲವೆ ಒಂದು
ಬದಲಿತೆಂದಿನ್ನೊಂದು ಕದಲಿದರೆ. ಛೆ, ಇಲ್ಲ
ಬಿರುಗಾಳಿಯಲ್ಲು ಕಂಪಿಸದೆ ನಿಲ್ಲುವುದು ಅದು
ಸ್ಥಿರವಾದ ಜ್ಯೋತಿ, ಕಡಲಲ್ಲಿ ಕುರುಡಲೆಯುವಾ
ಯಾವುದೇ ದೋಣಿಗದು ಧ್ರುವತಾರೆ : ಅಳೆಯುವುದು
ಸಾಧ್ಯವಿರಬಹುದು ಅದರೆತ್ತೆರವ, ನಿಜಬೆಲೆಯ
ತಿಳಿವ ಯತ್ನವು ಮಾತ್ರ ವ್ಯರ್ಥ. ಜವರಾಯನ
ಪಾಶಕೊಳಗಾದರೂ ಗುಲಾಬಿ ತುಟಿ ಕೆನ್ನೆಗಳು,
ಮೋಸಹೋಗದು ಪ್ರೀತಿ. ಕಾಲನ ಗಳಿಗೆ ವಾರ
ಕದಲಿಸವು ಅವನು, ಉಳಿಯುವುದು ಪ್ರಳಯದವರೆಗು.
ಸತ್ಯಸ್ಯ ಸತ್ಯ ಈ ಮಾತು, ಆಯಿತೊ ಸುಳ್ಳು
ನಾನು ಬರೆದುದೆ ಸುಳ್ಳು, ಜನ ಒಲಿದುದೇ ಸುಳ್ಳು.
*****
ಮೂಲ: ವಿಲಿಯಂ ಷೇಕ್ಸ್ಪಿಯರ್
Sonnet 116
Let me not to the marriage of true minds
Related Post
ಸಣ್ಣ ಕತೆ
-
ಮುದುಕನ ಮದುವೆ
ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…
-
ಅಹಮ್ ಬ್ರಹ್ಮಾಸ್ಮಿ
ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…
-
ಜೋತಿಷ್ಯ
ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…
-
ವ್ಯವಸ್ಥೆ
ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…
-
ಗೋಪಿ
ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…