ರುಚಿಯನ್ನು ಕೆರಳಿಸಲು ಕಟುಮಸಾಲೆಗಳಿಂದ
ಬೊಡ್ಡು ನಾಲಿಗೆಯನ್ನು ಚುರುಕುಗೊಳಿಸುವ ಹಾಗೆ,
ಮೈಯ ರಕ್ಷಿಸಲು ಗೊತ್ತಿರದ ಬೇನೆಗಳಿಂದ
ಅತಿ ಎನಿಸುವಷ್ಟು ಔಷಧ ತಿನ್ನಿಸುವ ಹಾಗೆ,
ನಿನ್ನ ಗುಣ ಪ್ರೀತಿ ಮಾಧುರ್ಯ ಯಥೇಷ್ಟ ಸವಿದು
ಚುರುಕು ಸಂಬಾರಗಳ ಕೆಣಕನ್ನಪೇಕ್ಷಿಸಿದೆ;
ಸುಖವುಂಡು ಪಟ್ಟ ಸಂತೃಪ್ತಿಯಲಿ ಬಸವಳಿದು
ತದ್ವಿರುದ್ದ ಸ್ಥಿತಿಯ ಬಯಸಿದೆ ಅಗತ್ಯವಿರದೆ.
ಇಲ್ಲದ ಅನಿಷ್ಟಗಳ ಸುಳ್ಳೆ ಕಲ್ಪಿಸಿಕೊಂಡು
ಅಲ್ಲದ್ದ ಮಾಡಿದೆ, ಶುದ್ದ ಆರೋಗ್ಯವನೆ
ಒಡ್ಡಿದೆ ಚಿಕಿತ್ಸೆಗೆ, ಅಲ್ಲಸಲ್ಲದ್ದುಂಡು
ಗುಣಪಡಿಸ ಹೊರಟೆ ಪರಿಶುದ್ದವಾದದ್ದನ್ನೆ.
ಅನುಭವಿಸಿ ಕಡೆಗೆ ನಿಜವಾದ ಪಾಠವ ಕಲಿತೆ
ನಿನಗೆ ಬೇಸರಿಸಿ ಮದ್ದುಣಲು ವಿಷ ಎಂದಂತೆ.
*****
ಮೂಲ: ವಿಲಿಯಂ ಷೇಕ್ಸ್ಪಿಯರ್
Sonnet 118
Like as to make our appetites more keen
Related Post
ಸಣ್ಣ ಕತೆ
-
ಬಾಳ ಚಕ್ರ ನಿಲ್ಲಲಿಲ್ಲ
ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…
-
ಮಾದಿತನ
ಮುಂಗೋಳಿ... ಕೂಗಿದ್ದೆ ತಡ, ಪೆರ್ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…
-
ಮತ್ತೆ ಬಂದ ವಸಂತ
ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…
-
ದೇವರು ಮತ್ತು ಅಪಘಾತ
ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…
-
ಕನಸುಗಳಿಗೆ ದಡಗಳಿರುದಿಲ್ಲ
ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…