ಅಂತರಂಗದ ನರಕ ಕುದಿಸಿ ಭಟ್ಟಿಯ ಇಳಿಸಿ
ಕೊಟ್ಟ ಮೋಹಿನಿಯ ಕಂಬನಿಯ ಅದೆಷ್ಟು ಕುಡಿದೆ!
ಭರವಸೆಗೆ ಶಂಕೆಯ ಶಂಕೆಗಾಸೆಯ ಬೆರಸಿ,
ಗೆದ್ದೆ ಇನ್ನೇನೆಂಬ ಗಳಿಗೆಯಲ್ಲೇ ಬಿದ್ದೆ.
ಕೊಳಕು ತಪ್ಪುಗಳಲ್ಲಿ ಬಳಸಿಯೂ ನಾನೆಂಥ
ಅದೃಷ್ಟವಂತ ಎನ್ನುವ ಹಿಗ್ಗಿನಲ್ಲಿದ್ದೆ;
ಎಲ್ಲೆ ತಪ್ಪಿತು ಏಕೆ ನನ್ನ ದೃಷ್ಟಿಗೆ? ಇಂಥ
ಕಾಮಸನ್ನಿಯ ಉರಿಗೆ ಹೇಗೆ ನಾ ಬಲಿಯಾದೆ ?
ಕೆಡಕಿನುಪಕಾರ ಎಂಥದು! ಸತ್ಯ ತಿಳಿಯಿತು,
ಒಳಿತು ಇನ್ನಷ್ಟು ಒಳಿತೆನಿಸುವುದು ಕೆಡುಕಿಂದ,
ಕುಸಿದ ಪ್ರೇಮವ ಮತ್ತೆ ಎತ್ತಿಕಟ್ಟಲು ಆಯ್ತು
ಇನ್ನಷ್ಟು ಭದ್ರ ಇನ್ನೆಷ್ಟು ಎತ್ತರ ಚೆಂದ.
ಸಾಕಷ್ಟು ನರಳಿ ಮರಳಿರುವೆ, ಮಾಡಿದ್ದಕ್ಕೆ,
ಮೂರುಮಡಿ ಗಳಿಸಿರುವೆ ಮುಂಚೆ ಕಳೆದದ್ದಕ್ಕೆ.
*****
ಮೂಲ: ವಿಲಿಯಂ ಷೇಕ್ಸ್ಪಿಯರ್
Sonnet 119
What potions have I drunk of Siren tears
Related Post
ಸಣ್ಣ ಕತೆ
-
ಮೃಗಜಲ
"People are trying to work towards a good quality of life for tomorrow instead of living for today, for many… Read more…
-
ಇನ್ನೊಬ್ಬ
ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…
-
ಧರ್ಮಸಂಸ್ಥಾಪನಾರ್ಥಾಯ
ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…
-
ಮಿಂಚಿನ ದೀಪ
ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…
-
ದೇವರೇ ಪಾರುಮಾಡಿದಿ ಕಂಡಿಯಾ
"Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…