ನನ್ನೊಲವು ರಾಜಕಾರಣಕೆ ಹುಟ್ಟಿದ್ದಿತೊ

ನನ್ನೊಲವು ರಾಜಕಾರಣಕೆ ಹುಟ್ಟಿದ್ದಿತೊ
ಕಾಲಕಾಲದ ಪ್ರೀತಿದ್ವೇಷಕ್ಕೆ ಪಕ್ಕಾಗಿ,
ಕಸದಲ್ಲಿ ಕಸವೊ, ಹೂರಾಶಿಯಲಿ ಬಿಡಿಹೂವೊ
ಆಗಿ ಅಳುತಿತ್ತು ತಬ್ಬಲಿ ಭ್ರಷ್ಟಹುಟ್ಟಾಗಿ.
ಅದರ ಅಡಿಗಿಲ್ಲ ಆಕಸ್ಮಿಕದ ತಳಪಾಯ,
ಆಡಂಬರದ ಮಂದಹಾಸಕದು ಬಲಿಯಲ್ಲ;
ಕಾಲಕಾಲಕ್ಕೆ ತಕ್ಕಂತೆ ಹೊರಳುವ ರುಚಿಯ
ಅದುಮಿಟ್ಟ ಅತೃಪ್ತಿ ಏಟಿಗುರುಳುವುದಲ್ಲ ;
ನಾಲ್ಕೆ ಗಳಿಗೆಗಳ ಅಲ್ಪಾವಧಿಯ ನರಿ ನೀತಿ-
ತಂತ್ರ, ಧರ್‍ಮ ವಿರೋಧಿ ರೀತಿಗಳ ಭಯವಿಲ್ಲ ;
ಬಿಸಿಲುರಿಗೆ ಬೆಳೆದು ಬಿರುಮಳೆಗೆ ಅಡಗದ ಛಾತಿ,
ಭವ್ಯ ಸ್ವತಂತ್ರ ಸ್ಮಾರಕ ಅದಕೆ ಎದುರಿಲ್ಲ.
ತಪ್ಪಿನ ಹೆಸರಿನಲ್ಲಿ ಶುಭಕ್ಕೆ ಮಡಿದವರನ್ನು
ಸಾಕ್ಷಿ ಕರೆವೆ ಇದಕ್ಕೆ ಕಾಲವಂಚಿತರನ್ನು
*****
ಮೂಲ: ವಿಲಿಯಂ ಷೇಕ್ಸ್‌ಪಿಯರ್
Sonnet 124
If my dear love were but the child of state

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ರಂಗಣ್ಣನ ಕನಸಿನ ದಿನಗಳು – ೨೩
Next post ಬೇವು ಬೆಲ್ಲ

ಸಣ್ಣ ಕತೆ

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

cheap jordans|wholesale air max|wholesale jordans|wholesale jewelry|wholesale jerseys