ನಿನ್ನ ನೆತ್ತಿಗೆ ಛತ್ರ ಹಿಡಿದು ಹೊರಗಿನ ಮಂದಿ

ನಿನ್ನ ನೆತ್ತಿಗೆ ಛತ್ರ ಹಿಡಿದು ಹೊರಗಿನ ಮಂದಿ-
ಯೆದುರು ಗೌರವ ಮೆರೆದರದು ನನಗೆ ಲಾಭವೇ?
ಸುಸ್ಥಿರ ಭವಿಷ್ಯ ಜೀವನಕೆಂದು ಅಡಿಪಾಯ
ಹಾಕುವುದು ವ್ಯರ್‍ಥ ಎಂದೇನು ನಾ ಅರಿಯೆನೆ ?
ಸರಳನಡೆ ನೀಗಿ, ಆಡಂಬರಕೆ ಬಲಿ ಹೋಗಿ,
ಅಂತಸ್ತು ಠೀವಿ ಸಭೆಮನ್ನಣೆಗೆ ಸಿರಿಯನೇ
ಸುರಿದು ಆಸೆಯಲಿ ಕಾಯುತ್ತಲೇ ಹುಸಿಯಾಗಿ
ಮರುಕಕೀಡಾದ ತವಕಿಗಳ ನಾ ಕಾಣೆನೇ?
ನನ್ನ ಸೇವೆಯೊ ನಿನ್ನ ಹೃದಯದಾರಾಧನೆಯು,
ಕೊಡುಗೆಯೋ ಸರಳ, ಪ್ರೀತಿಗೆ ಸಂದ ಬಾಗಿನವು,
ಎರಡನೆ ನೆಲೆಯದಲ್ಲ, ಕೃತ್ರಿಮವನೆ ಅರಿಯದದು,
ಇದು ಪರಸ್ಪರ ಕೊಡುಗೆ, ನಿನಗಾಗಿ ನಾನು.
ಬೇಹುಗಾರರ ಮಾತ ಎಸೆ ನಿಜಹೃದಯವೊಂದು
ಎಷ್ಟೇ ನಿಂದನೆಗೊಂಡೂ ನಿನ್ನಂಕೆಗೊಳಪಡದು.
*****
ಮೂಲ: ವಿಲಿಯಂ ಷೇಕ್ಸ್‌ಪಿಯರ್
Sonnet 125
Were’t aught to me I bore the canopy

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಳ್ಳರ ಕೂಟ – ೧
Next post ಅನೇಕತೆಯಲ್ಲಿ ಏಕತೆ

ಸಣ್ಣ ಕತೆ

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

cheap jordans|wholesale air max|wholesale jordans|wholesale jewelry|wholesale jerseys