Home / ಕವನ / ಅನುವಾದ / ಏ ಕ್ರೂರಿ ಹೆಣ್ಣೆ ತುಸು ಕಿವಿಗೊಡು ವಿವೇಕಕ್ಕೆ

ಏ ಕ್ರೂರಿ ಹೆಣ್ಣೆ ತುಸು ಕಿವಿಗೊಡು ವಿವೇಕಕ್ಕೆ

ಏ ಕ್ರೂರಿ ಹೆಣ್ಣೆ ತುಸು ಕಿವಿಗೊಡು ವಿವೇಕಕ್ಕೆ,
ತುಟಿ ಬಿಗಿಹಿಡಿದ ನನ್ನ ತಾಳ್ಮೆಯ ತಿರಸ್ಕರಿಸಿ
ಸಿಡಿಸದಿರು, ಇಲ್ಲವೇ ವ್ಯಥೆ ನನ್ನ ನಾಲಿಗೆಗೆ
ನುಡಿಯ ಕೊಡುವುದು; ಅವೋ ನಿನ್ನ ಕರುಣೆಯ ಬಯಸಿ
ನಾ ಪಡುವ ಯಾತನೆಯನೆಲ್ಲ ಹೊರಹಾಕುವುವು.
ನನ್ನ ಈ ತಿಳಿವಳಿಕೆ ಮಾತನ್ನಷ್ಟು ಕೇಳು,
ಪ್ರೀತಿಯಿರದಿದ್ದರೂ ಇದೆಯೆನ್ನು; ಸಾವು
ಹೊಸಿಲಲ್ಲೆ ಇದ್ದರೂ ಗುಣವಾಗುವುದು ತಾಳು
ಎನುವ ವೈದ್ಯನ ಹಾಗೆ, ನಿರಾಶೆಗೊಂಡರೆ ನಾನು
ಹುಚ್ಚನಾಗುವೆ, ಹುಚ್ಚ ನಿಂದಿಸುವ ನಿನ್ನನ್ನು,
ಲೋಕ ತಿರುಚುವುದು ಅಪಾರ್‍ಥಕ್ಕೆ ಮಾತನ್ನು,
ಹುಚ್ಚು ಕಿವಿ ನಂಬುವುವು ಹುಚ್ಚು ನಿಂದಕರನ್ನು.
ಚಾಡಿಮಾತಿಗೆ ನಿನ್ನ ಕಿವಿ ತೆರೆಯದೆಯೆ ಇರಲಿ,
ಎಲ್ಲೇ ಹೋಗಲಿ ಹೃದಯ, ಕಣ್ಣು ನೆಟ್ಟಗೆ ಇರಲಿ.
*****
ಮೂಲ: ವಿಲಿಯಂ ಷೇಕ್ಸ್‌ಪಿಯರ್
Sonnet 140
Be wise as thou art cruel, do not press

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಂ ಎನ್ ಎಸ್ ರಾವ್