ನಿಜ ಹೇಳಲೇ ಕೇಳು ನನ್ನ ಈ ಕಣ್ಣುಗಳು
ನಿನ್ನನೊಲಿದಿಲ್ಲ, ಏಕೆಂದರಾಕಣ್ಣುಗಳು
ಒಂದು ಸಾವಿರ ತಪ್ಪ ನಿನ್ನಲ್ಲಿ ಕಾಣುವುವು;
ಆದರವು ಒದ್ದುದನು ಈ ಹೃದಯ ಒಲಿಯುವುದು,
ಕಂಡು ಕಂಡೂ ನಿನ್ನ ಬಯಸುವುದು ಮರುಳಿನಲಿ,
ನನ್ನ ಕಿವಿಗಳಿಗೆ ಹಿತವೆನ್ನಿಸದು ನಿನ್ನ ದನಿ,
ಕಾಮಚೋದಕ ಸ್ಪರ್ಶ ಎಬ್ಬಿಸುವ ಕಚಗುಳಿ
ರುಚಿ ವಾಸನೆಗಳು ಸಹ ನಿನ್ನೊಡನೆ ವಿಷಯ ತನಿ-
ಭೋಜನವ ಬಯಸವು. ಆದರಿದೆ ಆಶ್ಚರ್ಯ.
ನನ್ನೆಲ್ಲ ಬುದ್ದಿಯೂ ಎಲ್ಲ ಇಂದ್ರಿಯಗಳೂ
ಈ ಹುಚ್ಚು ಹೃದಯ ನಿನ್ನನ್ನು ಓಲೈಸುತ್ತ
ಸ್ವಾಭಿಮಾನಿಯು ದಾಸನಾಗುವುದ ತಡೆಯವು.
ಆದರೀ ಪಿಡುಗು ನನ್ನೊಂದು ಲಾಭವೂ ಕೂಡ,
ತಪ್ಪಿಗೆಳೆವವಳೆ ನೀಡುವಳು ಶಿಕ್ಷೆಯ ಕೂಡ.
*****
ಮೂಲ: ವಿಲಿಯಂ ಷೇಕ್ಸ್ಪಿಯರ್
Sonnet 141
In faith I do not love thee with mine eyes
Related Post
ಸಣ್ಣ ಕತೆ
-
ವಾಮನ ಮಾಸ್ತರರ ಏಳು ಬೀಳು
"ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…
-
ಸಾವಿಗೊಂದು ಸ್ಮಾರಕ
ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…
-
ಬೂಬೂನ ಬಾಳು
ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…
-
ಬಾಳ ಚಕ್ರ ನಿಲ್ಲಲಿಲ್ಲ
ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…
-
ಮೃಗಜಲ
"People are trying to work towards a good quality of life for tomorrow instead of living for today, for many… Read more…