ವರಾ ಬಂದಾ ಸರಾ ತಂದಾ

ವರಾ ಬಂದಾ ಸರಾ ತಂದಾ
ಎತ್ತ ಹೋದಳು ರೂಪಸಿ
ಯಾಕ ನಾಚಿಗಿ ಯಾಕ ಅಂಜಿಕಿ
ಯಾಕ ನಿಂತಳು ದೇವಕಿ

ದೂರ ಮುಗುಲಾ ಹನಿಯ ನಿಬ್ಬಣ
ನೀರ ಹಬ್ಬವ ತಂದಿತ
ಬಿಸಿಲು ಸತ್ತಿತ ಢಗಿಯು ಬತ್ತಿತ
ಕಣ್ಣು ಶೀತಲವಾಯಿತ

ಕರಿಯ ಮಾಡದಿ ರವಿಯು ಮಲಗಿದಾ
ಕನಸು ಬಾಗಿಲ ತೆರೆಯಿತ
ಕ್ಷಣದ ಜೊಂಪಿಗೆ ನೂರು ಸಂಪಿಗೆ
ಹೂವು ಅರಳಿ ಸುರಿಯಿತ

ಹೆಂಗ ಏನೊ ಕದ್ದು ತಂದಾ
ಪಿಲ್ಲಿಪಾಟಲಿ ಸಿಕ್ಕವ
ನೆಲ್ಲಿ ಮಾವು ಬೇವು ಕಾಯಿಯ
ಸರಾ ಶಿವನನು ಸೇರಿತ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಾವು
Next post ಯಾಕಾಧುನಿಕ ಜನಕಿಷ್ಟು ಕಷ್ಟವೋ ಶಿಷ್ಟ ಕೃಷಿಯೆನ್ನಲಿಕೆ?

ಸಣ್ಣ ಕತೆ

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

cheap jordans|wholesale air max|wholesale jordans|wholesale jewelry|wholesale jerseys